12:58 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ ಮಾನವತೆಗೆ ಕಳಂಕ: ಮಂಗಳೂರು ಬಿಷಪ್‌ ಡಾ.ಪೀಟರ್‌ ಪಾವ್ಲ್‌ ಸಲ್ಡಾನಾ ಖೇದ

24/04/2025, 14:29

ಮಂಗಳೂರು(reporterkarnataka.com): ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ. ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.
ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.
ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು