5:03 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Chamarajanagara | ಸಂಪುಟ ಸದಸ್ಯರು ದೇವಾಲಯಕ್ಕೆ: ಸಚಿವ ಮಹದೇವಪ್ಪ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಭೇಟಿ

25/04/2025, 11:28

ಮಲೆಮಹದೇಶ್ವರಬೆಟ್ಟ(reporterkarnataka.com): ನಾಡಿನ ಐತಿಹಾಸಿಕ ತಾಣವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದ್ದು ಇಡೀ ಸರ್ಕಾರವೇ ಚಾಮರಾಜನಗರದ ಮಹದೇಶ್ವರ ಬೆಟ್ಟದಲ್ಲಿ ಬೀಡು ಬಿಟ್ಟಿದೆ.


ಸಹಜವಾಗಿ ಇಲ್ಲಿಗೆ ಆಗಮಿಸಿದ ಸಚಿವರೆಲ್ಲರೂ ಕೂಡಾ ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆಯುವುದು ವಾಡಿಕೆ. ಇಂದು ಸಚಿವರೆಲ್ಲಾ ಒಬ್ಬೊಬ್ಬರಾಗಿ ಮಹದೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿರುವ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್. ಸಿ. ಮಹದೇವಪ್ಪನವರು ಇದಕ್ಕೆ ವಿಭಿನ್ನವಾಗಿ ಬೆಟ್ಟಕ್ಕೆ ಹತ್ತಿರ ಇರುವ ಬುಡಕಟ್ಟು ಸಮುದಾಯಗಳ ಜನತಾ ಕಾಲೋನಿಗೆ ಭೇಟಿ ನೀಡಿ, ಸಂಕಷ್ಟಗಳನ್ನು ಆಲಿಸುವ ಮೂಲಕ ಮಾದರಿ ಆಗಿದ್ದಾರೆ.
ಸುಮಾರು ಒಂದು ಗಂಟೆಯ ಕಾಲ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ ಸಚಿವರು, ಜನತಾ ದೇವಾಲಯಕ್ಕೆ ತೆರಳಿ ಅವರನ್ನು ಆಲಿಸಿದ್ದು ಅತ್ಯಂತ ವಿಶೇಷವಾಗಿತ್ತು.
ಈ ಬಗ್ಗೆ ಮಾಧ್ಯಮ ಮಿತ್ರರು ಪ್ರಶ್ನೆ ಕೇಳಲಾಗಿ, ದೇವಸ್ಥಾನಕ್ಕಿಂತಲೂ ಜನರ ಬಳಿ ಹೋಗುವುದು ಹೆಚ್ಚು ಪೂರಕವಾದಂತ ಸಂಗತಿಯಾಗಿದ್ದು, ಜನರ ಮಾತುಗಳೇ ದೈವದ ಮಾತಾಗಿದೆ ಎಂದು ಹೇಳುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು