2:00 AM Saturday27 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:…

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್‌ ವಾರ್ಡನ್‌ ಮುಖ್ಯಸ್ಥ ಜೋ ಗೊನ್ಸಾಲ್ವಿಸ್‌ ಇನ್ನಿಲ್ಲ

29/08/2021, 21:40

ಮಂಗಳೂರು (reporterkarnataka.com):

ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್‌‌‌ ವಾರ್ಡನ್‌‌ ಜೋ ಗೊನ್ಸಾಲ್ವಿಸ್‌ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು 
ಅವರು 100ನೇ ವಸಂತಕ್ಕೆ ಕಾಲಿಡಲು ಕೇವಲ 4 ತಿಂಗಳು ಮಾತ್ರ ಬಾಕಿ ಉಳಿದಿತ್ತು. ಜನವರಿ 1 ಅವರ ಹುಟ್ಟಿದ ದಿನವಾಗಿತ್ತು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ
ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು. ನಿವೃತ್ತಿಯ ಬಳಿಕ ಜೋ ಅವರು ಶಿಕ್ಷಣ ಸಂಸ್ಥೆಗಳು ಹಾಗೂ ದತ್ತಿ ಸಂಸ್ಥೆಗಳ ನಿರ್ದೇಶಕ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು.

ಉತ್ತರ ಅಮೆರಿಕದ ಸೈಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸ್ಥಾಪಕ ನಿರ್ದೇಶಕರಾಗಿದ್ದರು. 
ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಿದ್ದರು.

ಟ್ರಾಫಿಕ್‌ ವಿಭಾಗದ ನೆರವಿನೊಂದಿಗೆ 2015 ರಲ್ಲಿ 94 ನೇ ವಯಸ್ಸಿನಲ್ಲಿ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸುರಕ್ಷಿತ ಚಾಲನೆ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಯುವಜನರೊಂದಿಗೆ ಅವರು ಸಂವಾದ ನಡೆಸುತ್ತಿದ್ದರು. ಅವರ ಸೇವೆ ಹಾಗೂ ಕೊಡುಗೆಗಾಗಿ ಟ್ರಾಫಿಕ್‌ ವಿಭಾಗ ಅವರನ್ನು ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು