4:23 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್‌ ವಾರ್ಡನ್‌ ಮುಖ್ಯಸ್ಥ ಜೋ ಗೊನ್ಸಾಲ್ವಿಸ್‌ ಇನ್ನಿಲ್ಲ

29/08/2021, 21:40

ಮಂಗಳೂರು (reporterkarnataka.com):

ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್‌‌‌ ವಾರ್ಡನ್‌‌ ಜೋ ಗೊನ್ಸಾಲ್ವಿಸ್‌ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು 
ಅವರು 100ನೇ ವಸಂತಕ್ಕೆ ಕಾಲಿಡಲು ಕೇವಲ 4 ತಿಂಗಳು ಮಾತ್ರ ಬಾಕಿ ಉಳಿದಿತ್ತು. ಜನವರಿ 1 ಅವರ ಹುಟ್ಟಿದ ದಿನವಾಗಿತ್ತು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ
ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು. ನಿವೃತ್ತಿಯ ಬಳಿಕ ಜೋ ಅವರು ಶಿಕ್ಷಣ ಸಂಸ್ಥೆಗಳು ಹಾಗೂ ದತ್ತಿ ಸಂಸ್ಥೆಗಳ ನಿರ್ದೇಶಕ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು.

ಉತ್ತರ ಅಮೆರಿಕದ ಸೈಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸ್ಥಾಪಕ ನಿರ್ದೇಶಕರಾಗಿದ್ದರು. 
ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಿದ್ದರು.

ಟ್ರಾಫಿಕ್‌ ವಿಭಾಗದ ನೆರವಿನೊಂದಿಗೆ 2015 ರಲ್ಲಿ 94 ನೇ ವಯಸ್ಸಿನಲ್ಲಿ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸುರಕ್ಷಿತ ಚಾಲನೆ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಯುವಜನರೊಂದಿಗೆ ಅವರು ಸಂವಾದ ನಡೆಸುತ್ತಿದ್ದರು. ಅವರ ಸೇವೆ ಹಾಗೂ ಕೊಡುಗೆಗಾಗಿ ಟ್ರಾಫಿಕ್‌ ವಿಭಾಗ ಅವರನ್ನು ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು