12:56 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್‌ ವಾರ್ಡನ್‌ ಮುಖ್ಯಸ್ಥ ಜೋ ಗೊನ್ಸಾಲ್ವಿಸ್‌ ಇನ್ನಿಲ್ಲ

29/08/2021, 21:40

ಮಂಗಳೂರು (reporterkarnataka.com):

ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್‌‌‌ ವಾರ್ಡನ್‌‌ ಜೋ ಗೊನ್ಸಾಲ್ವಿಸ್‌ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು 
ಅವರು 100ನೇ ವಸಂತಕ್ಕೆ ಕಾಲಿಡಲು ಕೇವಲ 4 ತಿಂಗಳು ಮಾತ್ರ ಬಾಕಿ ಉಳಿದಿತ್ತು. ಜನವರಿ 1 ಅವರ ಹುಟ್ಟಿದ ದಿನವಾಗಿತ್ತು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ
ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು. ನಿವೃತ್ತಿಯ ಬಳಿಕ ಜೋ ಅವರು ಶಿಕ್ಷಣ ಸಂಸ್ಥೆಗಳು ಹಾಗೂ ದತ್ತಿ ಸಂಸ್ಥೆಗಳ ನಿರ್ದೇಶಕ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು.

ಉತ್ತರ ಅಮೆರಿಕದ ಸೈಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸ್ಥಾಪಕ ನಿರ್ದೇಶಕರಾಗಿದ್ದರು. 
ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಿದ್ದರು.

ಟ್ರಾಫಿಕ್‌ ವಿಭಾಗದ ನೆರವಿನೊಂದಿಗೆ 2015 ರಲ್ಲಿ 94 ನೇ ವಯಸ್ಸಿನಲ್ಲಿ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸುರಕ್ಷಿತ ಚಾಲನೆ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಯುವಜನರೊಂದಿಗೆ ಅವರು ಸಂವಾದ ನಡೆಸುತ್ತಿದ್ದರು. ಅವರ ಸೇವೆ ಹಾಗೂ ಕೊಡುಗೆಗಾಗಿ ಟ್ರಾಫಿಕ್‌ ವಿಭಾಗ ಅವರನ್ನು ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು