10:38 PM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್‌ ವಾರ್ಡನ್‌ ಮುಖ್ಯಸ್ಥ ಜೋ ಗೊನ್ಸಾಲ್ವಿಸ್‌ ಇನ್ನಿಲ್ಲ

29/08/2021, 21:40

ಮಂಗಳೂರು (reporterkarnataka.com):

ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್‌‌‌ ವಾರ್ಡನ್‌‌ ಜೋ ಗೊನ್ಸಾಲ್ವಿಸ್‌ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾನುವಾರ ಕೊನೆಯುಸಿರೆಳೆದಿದ್ದಾರೆ.

1921ರಂದು ಜನಿಸಿದ್ದ ಗೊಲ್ಸಾಲ್ವಿಸ್‌ ಅವರು 
ಅವರು 100ನೇ ವಸಂತಕ್ಕೆ ಕಾಲಿಡಲು ಕೇವಲ 4 ತಿಂಗಳು ಮಾತ್ರ ಬಾಕಿ ಉಳಿದಿತ್ತು. ಜನವರಿ 1 ಅವರ ಹುಟ್ಟಿದ ದಿನವಾಗಿತ್ತು.

ಫಳ್ನೀರ್‌ ನಿವಾಸಿಯಾಗಿರುವ ಜೋ ಗೊಲ್ಸಾಲ್ವಿಸ್‌ ಅವರು ಬ್ರಿಟಿಷ್‌‌ ಸಂಸ್ಥೆ ಜೆ.ಎಲ್‌ ಮೋರಿಸನ್‌‌ನಲ್ಲಿ
ಮ್ಯಾನೇಜ್‌ಮೆಂಟ್‌‌ ಟ್ರೈನಿಯಾಗಿ ಸೇರ್ಪಡೆಗೊಂಡಿದ್ದರು. ನಂತರ ಅವರು ಕಂಪೆನಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಲಂಡನ್‌ ಇನ್‌ಸ್ಟಿಟ್ಯೂಟ್‌‌‌ ಆಫ್‌‌ ಮಾರ್ಕೆಟಿಂಗ್‌‌ನಲ್ಲಿ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಸ್ಥೆಯ ಚುನಾಯಿತ ಸದಸ್ಯರೂ ಆಗಿದ್ದರು. ನಿವೃತ್ತಿಯ ಬಳಿಕ ಜೋ ಅವರು ಶಿಕ್ಷಣ ಸಂಸ್ಥೆಗಳು ಹಾಗೂ ದತ್ತಿ ಸಂಸ್ಥೆಗಳ ನಿರ್ದೇಶಕ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದರು.

ಉತ್ತರ ಅಮೆರಿಕದ ಸೈಂಟ್ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಸಂಘದ ಸ್ಥಾಪಕ ನಿರ್ದೇಶಕರಾಗಿದ್ದರು. 
ಮಂಗಳೂರಿನ ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪೊಲೀಸ್ ಇಲಾಖೆ ಜತೆ ಕೈಜೋಡಿಸಿದ್ದರು.

ಟ್ರಾಫಿಕ್‌ ವಿಭಾಗದ ನೆರವಿನೊಂದಿಗೆ 2015 ರಲ್ಲಿ 94 ನೇ ವಯಸ್ಸಿನಲ್ಲಿ ಟ್ರಾಫಿಕ್ ವಾರ್ಡನ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಸುರಕ್ಷಿತ ಚಾಲನೆ ಸೇರಿದಂತೆ ಇತರ ಪ್ರಮುಖ ವಿಚಾರಗಳ ಬಗ್ಗೆ ಯುವಜನರೊಂದಿಗೆ ಅವರು ಸಂವಾದ ನಡೆಸುತ್ತಿದ್ದರು. ಅವರ ಸೇವೆ ಹಾಗೂ ಕೊಡುಗೆಗಾಗಿ ಟ್ರಾಫಿಕ್‌ ವಿಭಾಗ ಅವರನ್ನು ಗೌರವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು