7:41 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Puttur | ಏಪ್ರಿಲ್ 27: ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಕುಂಕುಮ ಮಹತಿ’ ಕೃತಿ ಲೋಕಾರ್ಪಣೆ; ಸಾಮೂಹಿಕ ಕುಂಕುಮಾರ್ಚನೆ

25/04/2025, 18:47

ಪುತ್ತೂರು(reporterkarnataka.com): ಭಾರತೀಯ ಭವ್ಯ ಸನಾತನ ಪರಂಪರೆಯ ಅಸ್ಮಿತೆ ಸಿಂಧೂರ, ಈ ಸಿಂಧೂರದ ಕುರಿತಾದ ಮಹತ್ವವನ್ನು ತಿಳಿಸುವ ಹಿನ್ನೆಲೆಯಲ್ಲಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪದ ಸಂಚಾಲಕಿ ಕೃಷ್ಣವೇಣಿ ಮುಳಿಯ ಅವರ ಮುತುವರ್ಜಿಯಲ್ಲಿ, ಕಾಸರಗೋಡಿನ ಲೇಖಕಿ ಶೀಲಾ ಲಕ್ಷ್ಮೀ ಅವರು ಬರೆದ ಕೃತಿ ‘ಕುಂಕುಮ ಮಹತಿ’ ಯು ಏಪ್ರಿಲ್ 27 ಭಾನುವಾರ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಬಳಿಯಲ್ಲಿರುವ ಅನ್ನಛತ್ರ ದಲ್ಲಿ ಬೆಳಗ್ಗೆ 9:30ಕ್ಕೆ ಲೋಕಾರ್ಪಣೆ ಗೊಳ್ಳಲಿದೆ.

ಬಳಿಕ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ, ಮುಳಿಯ ಪ್ರತಿಷ್ಠಾನ ಪುತ್ತೂರು ಸಹಯೋಗದಲ್ಲಿ , ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸಹಕಾರದಲ್ಲಿ ನಡೆಯುವ ಕೃತಿ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ದೇವಾಲಯ ಸಂವರ್ಧನ ಸಮಿತಿಯ ವಿಭಾಗ ಪ್ರಮುಖ್ ಕೇಶವ ಪ್ರಸಾದ್ ಮುಳಿಯ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್, ದೇವಾಲಯ ಸಂವರ್ಧನ ಸಮಿತಿ ಮಂಗಳೂರು ವಿಭಾಗ ಪ್ರಮುಖ್ ಗಣೇಶ ಮಂಗಳೂರು ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಾವಯವ ಕುಂಕುಮದ ಅರಿವನ್ನುಂಟು ಮಾಡುವ ನೆಟ್ಟಿನಲ್ಲಿ, ಸಾವಯವ ಕುಂಕುಮ ಅನಾವರಣಗೊಳ್ಳಲಿದೆ.
ಕೃತಿ ಲೋಕಾರ್ಪಣೆಯ ಬಳಿಕ ಭಗವತ್ ಭಕ್ತ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಆಸಕ್ತ ಕುಮಾರಿಯರು, ಮಹಿಳೆಯರು ಈ ಕಾರ್ಯಕ್ರಮದಲ್ಲಿ ಹಾಗೂ ಕೃತಿ ಲೋಕಾರ್ಪಣಾ ಸಮಾರಂಭಕ್ಕೆ ಭಾಗಿಯಾಗಿ ದೇವಿಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ವಿನಂತಿ. ಕುಂಕುಮಾರ್ಚನೆಗೆ ಬೇಕಾದ ಸಾಹಿತ್ಯವನ್ನು ಸಂಘಟಕರೇ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು