7:43 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ

28/04/2025, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ಅವರು ಮಾತನಾಡುತ್ತಾ, “ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು,” ಎಂದರು. ಜೊತೆಗೆ, ಹೊಸದಾಗಿ ಜಾರಿಗೆ ಬಂದಿರುವ ಬಿಎನ್ಎಸ್ (ಭದ್ರತಾ ಕ್ರಮ) ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಬಣಕಲ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸುತ್ತಮುತ್ತಲ ಶಾಲಾ ಕಟ್ಟಡಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿಗೆ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ಎಚ್ಚರಿಕೆ ನೀಡುತ್ತಾ, “ಸಮಾಜಿಕ ಏಕತೆಯನ್ನು ಹಾಳುಮಾಡುವ ಸಂದೇಶಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಮಕ್ಕಳ ರಕ್ಷಣೆ ಸಂಬಂಧಿತ ಪೋಕ್ಸೋ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
“ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಟ್ಟುಕೊಳ್ಳಬೇಕು” ಎಂದು ತೋಟದ ಮಾಲೀಕರಿಗೆ ಸಲಹೆ ನೀಡಿದರು.
“ಚಿಕ್ಕಮಗಳೂರು-ಮೂಡಿಗೆರೆ ಭಾಗ ಪ್ರವಾಸಿಗರ ನಾಡಾಗಿದ್ದು, ಹೆಚ್ಚಿನ ಪ್ರವಾಸಿಗರು ಕೊಟ್ಟಿಗೆಹಾರಕ್ಕೆ ಬಂದು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ಗಳನ್ನು ತಿನ್ನುತ್ತಾರೆ, ಹೀಗಾಗಿ ಆಹಾರದ ಗುಣಮಟ್ಟ ಕಾಪಾಡಿ, ಅಂಗಡಿ–ಹೋಟೆಲ್‌ಗಳ ಮುಂದೆ ಸ್ವಚ್ಛತೆ ಕಾಪಾಡಿ, ಕಸ ಹಾಕದಂತೆ ಜಾಗರೂಕರಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಶೀಲಾ, ಸದಸ್ಯರುಗಳಾದ ಸತೀಶ್ ಗೌಡ, ಸ್ಮಿತಾ, ವರ್ತಕರ ಸಂಘದ ಅಧ್ಯಕ್ಷ ಟಿ.ಎಮ್. ಗಜೇಂದ್ರ ಗೌಡ, ಸಮಾಜ ಸೇವಕ ಸಂಜಯ್ ಗೌಡ, ಆಟೋ ಸಂಘದ ಅಧ್ಯಕ್ಷ ರಮೇಶ್, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರು ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು