ಇತ್ತೀಚಿನ ಸುದ್ದಿ
ಸ್ವಚ್ಛ ಪುತ್ತೂರು ಕಾರ್ಯಕ್ರಮ: ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನಿಂದ ಕಾರ್ಮಿಕರ ದಿನಾಚರಣೆ
29/04/2025, 19:02

ಪುತ್ತೂರು(reporterkarnataka.com):ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ನವೀಕೃತ ಮಳಿಗೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ಸ್ವಚ್ಛ ಪುತ್ತೂರು ಕಾರ್ಯಕ್ರಮದ ಅಂಗವಾಗಿ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವು ಕೋರ್ಟ್ ರಸ್ತೆಯಲ್ಲಿರುವ ಮುಳಿಯ ಸಭಾಂಗಣದಲ್ಲಿ ಜರಗಲಿರುವುದು.
ಈ ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಾಗೂ ನಗರ ಸಭೆ ಸಿಬ್ಬಂದಿಗಳಿಗೆ ಅಧಿಕಾರಿಗಳು ಮತ್ತು ಸರ್ವ ಸದಸ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಜರಗಲಿದೆ. ಸ್ವಚ್ಛ ಪುತ್ತೂರು ಯೋಜನೆಯಲ್ಲಿ ಕೃಷ್ಣ ಮುಳಿಯ ಗ್ರೀನ್ ಎನರ್ಜಿ ಸಂಸ್ಥೆಯು ಪ್ರಮುಖ ಪಾತ್ರ ವಹಿಸಿರುವುದರಿಂದ , ಈ ಯೋಜನೆಯ ಭಾಗೀದಾರರು ಎಂಬ ನೆಲೆಯಲ್ಲಿ ನಗರಸಭೆಗೆ ಸಂಬಂಧಿಸಿ ರವರನ್ನು ಗೌರವಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮುಳಿಯ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೇಶವ ಪ್ರಸಾದ್ ಮುಳಿಯ ಮತ್ತು ಕೃಷ್ಣ ನಾರಾಯಣ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.