10:43 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

Karnataka | 30 ಸಾವಿರ ಮಹಿಳೆಯರ ಸ್ವ ಉದ್ಯೋಗಕ್ಕೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ

29/04/2025, 20:30

ಬೆಂಗಳೂರು(reporterkarnataka.com): ರಾಜ್ಯದ ಆಯ್ದ 100 ಗ್ರಾಮ ಪಂಚಾಯತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಯೋಜನೆಯಡಿ ಪ್ರತಿ ಜಿಲ್ಲೆಯಿಂದ ಆಯ್ದ 3 ಗ್ರಾಮ ಪಂಚಾಯತಿಗಳಂತೆ ಒಟ್ಟು 29 ಜಿಲ್ಲೆಗಳಿಂದ 87 ಕೇಂದ್ರಗಳು ಹಾಗೂ ಬೆಳಗಾವಿ ಜಿಲ್ಲೆಯಿಂದ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳಂತೆ ಒಟ್ಟು 100 ಕೇಂದ್ರಗಳನ್ನು ಪ್ರಾರಂಭಿಸಲಾಗುವುದು, ಪ್ರಾಯೋಗಿಕವಾಗಿ 100 ಗ್ರಾಮ ಪಂಚಾಯತಿಗಳಲ್ಲಿ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ-ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದ್ದು, ಈ ಕೇಂದ್ರಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಪ್ರತಿ ಕೇಂದ್ರದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ಮಹಿಳೆಯರಿಗೆ ಸರ್ಕಾರದ ಕೌಶಲ್ಯ ಅಭಿವೃದ್ಧಿ ನಿಗಮ, ರುಡ್ಸೆಟಿ-ಆರ್ಸೆಟಿ ಸರ್ಕಾರೇತರ ಬೆಂಬಲ ಸಂಸ್ಥೆಗಳ (TSA) ಮೂಲಕ ತರಬೇತಿ ನೀಡಿ, ಬ್ಯಾಂಕುಗಳೊಂದಿಗೆ ಸಂಪರ್ಕ ಏರ್ಪಡಿಸಿ, ಅನುಸರಣೆ ಮತ್ತು ಬೆಂಬಲ ನೀಡುವ ಮೂಲಕ 30,000 ಮಹಿಳೆಯರಿಗೆ ಸ್ವ-ಉದ್ಯೋಗ ಪ್ರಾರಂಭಿಸುವಂತೆ ಪ್ರೇರೆಪಿಸಲಾಗುವುದು, ಪ್ರತಿ ತರಬೇತಿ ಕೇಂದ್ರದಿಂದ 300 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಪ್ರದೇಶದ ಮಹಿಳೆಯರು ಕೃಷಿಯಿಂದ ಹೆಚ್ಚಿನ ಲಾಭಪಡೆಯಲಾಗದೇ, ಆದಾಯ ಗಳಿಕೆಗಾಗಿ ಪರ್ಯಾಯ ವ್ಯವಸ್ಥೆ ಹುಡುಕುತ್ತಿರುವುದರಿಂದ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉದ್ಯೋಗ ಒದಗಿಸಬಲ್ಲ ಕೌಶಲ್ಯ ತರಬೇತಿಗಳ ಕೊರತೆ ಇರುವುದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸುವ ಅವಶ್ಯಕತೆ ಇರುವುದನ್ನು ಗಮನಿಸಿ, ಆಯ-ವ್ಯಯದಲ್ಲಿ ಘೋಷಿಸಿರುವಂತೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಇದರಿಂದಾಗಿ ಮಹಿಳೆಯರಲ್ಲಿ ಅಡಗಿರುವ ಸಾಮರ್ಥ್ಯ ವೃದ್ಧಿಗೊಳ್ಳುವುದಲ್ಲದೆ ಉತ್ಪಾದನಾ ಚಟುವಟಿಕೆಗಳನ್ನು ಪ್ರಾರಂಭಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದರ ಜೊತೆಗೆ ಸ್ವಾವಲಂಬಿಗಳನ್ನಾಗಿ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು