5:20 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಬಸ್: ಅದೃಷ್ಟವಶಾತ್ 40 ಮಂದಿ ಪ್ರವಾಸಿಗರು ಅಪಾಯದಿಂದ ಪಾರು

29/04/2025, 21:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಇಂದು ಸಂಜೆ ಭಾರೀ ಗಾಳಿ ಮಳೆಯಾಗಿದ್ದು, ಬಾಳೆಹೊನ್ನೂರು-ಕಳಸ ಮಾರ್ಗ ಮಧ್ಯದಲ್ಲಿರುವ ನೂರಪಾಲ್ ಎಂಬಲ್ಲಿ ಬಸ್ಸೊಂದು ರಸ್ತೆಯಲ್ಲಿ ಬಿದ್ದ ಮರ ತಪ್ಪಿಸಲು ಹೋಗಿ ಚರಂಡಿಗಿಳಿದ ಘಟನೆ ನಡೆದಿದೆ.
ಭಾರೀ ಗಾಳಿ-ಮಳೆಗೆ ಮರವೊಂದು ರಸ್ತೆ ಮೇಲೆ ಮುರಿದು ಬಿದ್ದಿತ್ತು. ಬಸ್ ಚಾಲಕ ಮರ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದಿದೆ. ಚರಂಡಿಗೆ ಇಳಿದ ಬಸ್ ಚಾಲಕನ ಚಾಕಚಕ್ಯತೆಯಿಂದ ಪಲ್ಟಿಯಾಗೋದು ತಪ್ಪಿದೆ. ಅದೃಷ್ಟವಶಾತ್ 40 ಮಂದಿ ಪ್ರಯಾಣಿಕರಿದ್ದ ಪ್ರವಾಸಿ ಬಸ್ ಜಸ್ಟ್ ಮಿಸ್ ಆಗಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ಒಂದೆಡೆ ಮರ, ಮತ್ತೊಂದೆಡೆ ಬಸ್ ನಿಂತಿರುವ ಪರಿಣಾಮ
ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಸುಮಾರು 2 ಕಿ.ಮೀ. ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಬಂದಿದ್ದ ಪ್ರವಾಸಿ ಬಸ್ ಇದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು