1:04 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

Mangaluru | ಗುಂಪು ದಾಳಿಯಿಂದ ಯುವಕನ ಸಾವು: ಇನ್‌ಸ್ಪೆಕ್ಟರ್ ಸೇರಿದಂತೆ 3 ಮಂದಿ ಪೊಲೀಸರ ಅಮಾನತು

01/05/2025, 12:16

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಬಳಿ ಯುವಕನೊಬ್ಬ ಗುಂಪು ದಾಳಿಗೊಳಗಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 20ಕ್ಕೇರಿದೆ.
ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್
ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಅವರು ಅಮಾನತುಗೊಂಡಿದ್ದಾರೆ.
ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಭಾನುವಾರ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ ಎಂಬ ಕಾರಣಕ್ಕೆ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು 25 ಜನರನ್ನು ತನಿಖೆಗೆ ಒಳಪಡಿಸಿ ಮೊದಲಿಗೆ 15 ಜನರನ್ನು ಬಂಧಿಸಿದ್ದರು, ಬಳಿಕ ಬಂಧಿತರ ಸಂಖ್ಯೆ 20 ಕ್ಕೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು