6:49 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

01/05/2025, 12:31

ಬೆಂಗಳೂರು(reporterkarnataka.com): ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು, ಇನ್ನೂ ಸುಮಾರು 93 ಸಾವಿರ ಮೆಟ್ರಿಕ್‌ ಟನ್‌ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಟನ್‌ಗೆ ರೂ 7,550 ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ 450 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಒಟ್ಟು ಪ್ರತಿ ಕ್ವಿಂಟಾಲ್‌ಗೆ ರೂ 8000ಗಳಂತೆ ಖರೀದಿ ಮಾಡಲಾಗುತ್ತಿದೆ. ರೈತರು ಈ ಅವಕಾಶ ಬಳಕೆ ಮಾಡಿಕೊಂಡು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಾಟ ಮಾಡಬಹುದು ಎಂದು ಸಚಿವ ಶಿವಾನಂದ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು