5:44 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

Agricultur | ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

01/05/2025, 12:31

ಬೆಂಗಳೂರು(reporterkarnataka.com): ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ ಖರೀದಿ ಪ್ರಮಾಣ ಇನ್ನೂ ಆಗದ ಕಾರಣ ಖರೀದಿ ಅವಧಿ ವಿಸ್ತರಣೆ ಮಾಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ.
ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ 3.06 ಲಕ್ಷ ಮೆಟ್ರಿಕ್‌ ಟನ್‌ ತೊಗರಿ ಖರೀದಿಗೆ ಅನುಮತಿ ನೀಡಿದ್ದು, ಇದುವರೆಗೆ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ 1.83 ಲಕ್ಷ ಮೆಟ್ರಿಕ್‌ ಟನ್‌ ಖರೀದಿ ಮಾಡಲಾಗಿದೆ. ಇನ್ನೂ 2.70 ಲಕ್ಷ ಮೆಟ್ರಿಕ್ ಟನ್ ಪ್ರಮಾಣದಷ್ಟು ತೊಗರಿಯನ್ನು ರೈತರು ನೋಂದಣಿ ಮಾಡಿಸಿಕೊಂಡಿದ್ದು, ಇನ್ನೂ ಸುಮಾರು 93 ಸಾವಿರ ಮೆಟ್ರಿಕ್‌ ಟನ್‌ ಖರೀದಿ ಮಾಡಬೇಕಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ಟನ್‌ಗೆ ರೂ 7,550 ನಿಗದಿಪಡಿಸಿದ್ದು, ಈ ಬೆಲೆ ಕಡಿಮೆಯಾಗಿದ್ದು, ಹೆಚ್ಚಳ ಮಾಡಬೇಕು ಎಂದು ರೈತರು ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದು ಪ್ರೋತ್ಸಾಹ ಧನ ಘೋಷಣೆ ಮಾಡಲು ಮನವಿ ಮಾಡಿದಾಗ ಬೇಡಿಕೆಗೆ ಸ್ಪಂದಿಸಿ ಪ್ರತಿ ಕ್ವಿಂಟಾಲ್‌ಗೆ ರೂ 450 ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಒಟ್ಟು ಪ್ರತಿ ಕ್ವಿಂಟಾಲ್‌ಗೆ ರೂ 8000ಗಳಂತೆ ಖರೀದಿ ಮಾಡಲಾಗುತ್ತಿದೆ. ರೈತರು ಈ ಅವಕಾಶ ಬಳಕೆ ಮಾಡಿಕೊಂಡು ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ತೊಗರಿ ಮಾರಾಟ ಮಾಡಬಹುದು ಎಂದು ಸಚಿವ ಶಿವಾನಂದ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು