3:57 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

Kalladka | ನಿಟಿಲಾಪುರ ಸದಾಶಿವ ದೇವಸ್ಥಾನ: ಮೇ 2ರಿಂದ 4ರ ವರೆಗೆ ಅತಿಮಹಾರುದ್ರಯಾಗ

01/05/2025, 16:32

ಬಂಟ್ವಾಳ(reporterkarnataka.com):ಅತಿಮಹಾರುದ್ರಯಾಗ ಸಮಿತಿ ವತಿಯಿಂದ ಮೊಗರ್ನಾಡು ಸಾವಿರ ಸೀಮೆಯ ನಿಟಿಲಾಪುರ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದ ವಠಾರದಲ್ಲಿ ಮೇ 2ರಿಂದ ಮೇ 4 ರವರಗೆ ಅತಿಮಹಾರುದ್ರಯಾಗ ನಡೆಯಲಿದೆ ಎಂದು ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ತಿಳಿಸಿದ್ದಾರೆ.

ಅವರು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು.
ಈ ಯಾಗದ ಅಂಗವಾಗಿ ಚಾಂದ್ರಮಾನ ಯುಗಾದಿಯ ಸಂದರ್ಭದಲ್ಲಿ ದೀಪ ಪ್ರಜ್ವಲಿಸಿ ಪ್ರಾರಂಭವಾದ ಪಾರಾಯಣ ಎ. 29ರ ವರೆಗೆ 18158 ಪಾರಾಯಣಗಳು ಪೂರ್ತಿಯಾಗಿದೆ.
ವಾರಣಾಸಿಯ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ, ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಾಡಿನ ಸಮಸ್ತ ಸಂಸ್ಥಾನದ‌ ಮಠಾಧೀಶರುಗಳ ದಿವ್ಯ ಉಪಸ್ಥಿತಿ, ವಿವಿಧ ಪುಣ್ಯ ಕ್ಷೇತ್ರಗಳ ಧರ್ಮಾಧಿಕಾರಿಗಳು , ಧರ್ಮದರ್ಶಿಗಳು, ಧಾರ್ಮಿಕ ಮುಖಂಡರುಗಳ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಲೋಕಲ್ಯಾಣಾರ್ಥವಾಗಿ ಅತಿಮಹಾರುದ್ರಯಾಗ ಸಂಕಲ್ಪದಂತೆ ನಡೆಯಲಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕವಾಗಿಯೇ ಏರ್ಪಡಿಸುತ್ತಿರುವುದು ಯಾಗದ ವಿಶೇಷವಾಗಿದೆ ಎಂದು ಹೇಳಿದರು.
ಮೇ 2ರಂದು ಶತರುದ್ರಾಭಿಷೇಕ, ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ 3ರಂದು ಕ್ಷೇತ್ರಕ್ಕೆ ಕಲ್ಲಡ್ಕ ಪೇಟೆಯಿಂದ ಹಸಿರು ಹೊರೆಕಾಣಿಕೆ ಶೋಭಯಾತ್ರೆ ನಡೆಯಲಿದೆ.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಮೇ 4ರಂದು ಅತಿಮಹಾರುದ್ರಯಾಗ ನಡೆಯಲಿದ್ದು, ಸಂಜೆ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ಮೂರು ದಿನಗಳಲ್ಲಿ ಸಾವಿರಾರು ಭಕ್ತರು ಯಾಗದಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಲಿದ್ದಾರೆ ಎಂದು ಅವರು ತಿಳಿಸಿದರು.
ಸಚಿನ್ ರೈ ಮಾಣಿ, ಅಜಿತ್ ಕುಮಾರ್ ಬರಿಮಾರ್, ಗಣೇಶ್ ಶೆಟ್ಟಿ ಗೋಳ್ತಮಜಲು, ತೋಟ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಉಪಸ್ಥಿತರಿದ್ದರು. ಕಲ್ಲಡ್ಕದಿಂದ ನೆಟ್ಲ ಕ್ಷೇತ್ರಕ್ಕೆ ವಾಹನ ವ್ಯವಸ್ಥೆ ಮಾಡಲಾಗುವುದು. ಪ್ರತಿದಿನ ಸಹಸ್ರಾರು ಮಂದಿ ಬರುವ‌ ಭಕ್ತಾದಿಗಳಿಗೆ ಅನ್ನಸಂತರ್ಪಣೆ, ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು