8:34 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

DK BJP | ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪ

01/05/2025, 20:20

ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಿರಂತರವಾಗಿ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು‌ ಕೇಸುಗಳನ್ನು ಹಾಕುವುದರ ಮೂಲಕ ಮಾನಸಿಕವಾಗಿ ಕುಗ್ಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯನ್ನು ಬಳಸಿ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷಸತೀಶ್ ಕುಂಪಲ ಆರೋಪಿಸಿದರು.
ದೇಶದ ಪರವಾಗಿ, ಹಿಂದುತ್ವದ ಕಾರ್ಯ ನಡೆಸುತ್ತಿರುವ ಕಾರ್ಯಕರ್ತರನ್ನು ಕಂಡಾಗ ಕಣ್ಣು ಕೆಂಪಾಗುವ ಸಿದ್ದರಾಮಯ್ಯ ನವರು ದೇಶದ್ರೋಹಿ ಕಿಡಿಗೇಡಿಗಳ ಬಗ್ಗೆ ಮೃದುತ್ವ ಪ್ರದರ್ಶಿಸಿ ಬಣ್ಣ ಬದಲಾಯಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಸಂವಿಧಾನಕ್ಕೆ ವಿರುದ್ದವಾಗಿ ಸರ್ಕಾರ ಆಡಳಿತ ನಡೆಸುತ್ತಿದೆ.
ವಿಧಾನ ಸಭೆಯ ಒಳಗಡೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕ್ರಮ ಗೊಳ್ಳಲು ತೋರಿದ ವಿಳಂಬ ರಾಜ್ಯದಲ್ಲಿ ನಡೆದ ಮತಾಂಧ ಕಿಡಿಗೇಡಿಗಳ ಕೃತ್ಯದ ಬಗ್ಗೆ ಸರ್ಕಾರದ ಮೌನ, ಪಾಕಿಸ್ತಾನ ಧ್ವಜಕ್ಕೆ ಪ್ರೀತಿ ತೋರಿದವರ ವಿರುದ್ಧ ಕ್ರಮ ಜರುಗಿಸಲು ನಿರ್ಲಕ್ಷ್ಯ ಗಳ ಪರಿಣಾಮವಾಗಿ ಮಂಗಳೂರಿನ ಕುಡುಪಿನಲ್ಲಿ ದೇಶದ್ರೋಹಿಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ಧೈರ್ಯ ಬಂದಿದೆ‌. ಅಲ್ಲಿ‌ನಡೆದ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯು ಅಮಾಯಕರನ್ನು ಬಂದಿಸಿರುವುದು, ಮನೆಗಳಿಗೆ ದಾಳಿ ನಡೆಸುತ್ತಿರುವುದು ಕಾಂಗ್ರೆಸ್ ನ‌ ಕುಮ್ಮಕ್ಕಿ ನಿಂದ ನಡೆಯುತ್ತಿದೆ. ಇಂತಹ ಘಟನೆಗಳಿಂದ ದೇಶಭಕ್ತರು ರೋಷ ಗೊಂಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ಮತಾಂಧರ ಪರವಾಗಿಯೇ ಇರುವಂತಹ ಭಾವನೆ ಜನಸಾಮಾನ್ಯರಲ್ಲಿ ಮೂಡಿದೆ. ಮಂಗಳೂರಿನ ಕುಡುಪು ಪರಿಸರದ ಘಟನೆಯನ್ನು ಕಾಂಗ್ರೆಸ್ ರಾಜಕೀಯ ದುರುದ್ದೇಶಕ್ಕಾಗಿ ಬಳಸುತ್ತಿದೆ. ಪೊಲೀಸ್ ಇಲಾಖೆಯನ್ನು ಕೈಗೊಂಬೆಯಾಗಿಸುತ್ತಿದೆ. ಇದನ್ನು ಭಾರತೀಯ ಜನತಾ ಪಾರ್ಟಿಯು ಸಹಿಸಲು ಸಾಧ್ಯವಿಲ್ಲ, ಶಾಂತಿಯುತ ದಕ್ಷಿಣ ಕನ್ನಡ ವನ್ನು ಕದಡುವ ಷಡ್ಯಂತ್ರ ನಡೆಯುತ್ತಿದೆ, ಸಂಘಟನೆಯ, ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕುಂಪಲ ಆಗ್ರಹಿಸಿದ್ದಾರೆ.
ಸಂಘ ಪರಿವಾರದ ಕಾರ್ಯಕರ್ತರ ಮನೋಬಲವನ್ನು ಕುಗ್ಗಿಸುವ ಕಾಂಗ್ರೆಸ್ ನ ಭಂಡ ಪ್ರಯತ್ನ ಎಂದಿಗೂ ಯಶಸ್ವಿಯಾಗದು. ಕುಡುಪು ಪ್ರಕರಣದ ಬಗ್ಗೆ ಕೂಲಂಕುಷವಾದ ತನಿಖೆಯಾಗ ಬೇಕಿದೆ. ಪೊಲೀಸ್ ಇಲಾಖೆ ಕಾಂಗ್ರೆಸ್ ನ ಕಪಿಮುಷ್ಠಿಯಲ್ಲಿದೆ ಎನ್ನುವುದನ್ನು ಕಳಚಿಸುವ ದಿಟ್ಟತನ ಪೊಲೀಸರಿಂದ ಆಗಬೇಕಿದೆ. ಇಲ್ಲವಾದರೆ ಭವಿಷ್ಯದಲ್ಲಿ ಸಂಭವಿಸುವ ಘಟನೆಗಳಿಗೆ ಇಲಾಖೆಯೇ ಹೊಣೆ ಹೊರೆ ಹೊರಬೇಕಾದೀತು ಎಂದು ಕುಂಪಲ ರವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು