2:23 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

DK BJP | ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪ

01/05/2025, 20:20

ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಿರಂತರವಾಗಿ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು‌ ಕೇಸುಗಳನ್ನು ಹಾಕುವುದರ ಮೂಲಕ ಮಾನಸಿಕವಾಗಿ ಕುಗ್ಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯನ್ನು ಬಳಸಿ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷಸತೀಶ್ ಕುಂಪಲ ಆರೋಪಿಸಿದರು.
ದೇಶದ ಪರವಾಗಿ, ಹಿಂದುತ್ವದ ಕಾರ್ಯ ನಡೆಸುತ್ತಿರುವ ಕಾರ್ಯಕರ್ತರನ್ನು ಕಂಡಾಗ ಕಣ್ಣು ಕೆಂಪಾಗುವ ಸಿದ್ದರಾಮಯ್ಯ ನವರು ದೇಶದ್ರೋಹಿ ಕಿಡಿಗೇಡಿಗಳ ಬಗ್ಗೆ ಮೃದುತ್ವ ಪ್ರದರ್ಶಿಸಿ ಬಣ್ಣ ಬದಲಾಯಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಸಂವಿಧಾನಕ್ಕೆ ವಿರುದ್ದವಾಗಿ ಸರ್ಕಾರ ಆಡಳಿತ ನಡೆಸುತ್ತಿದೆ.
ವಿಧಾನ ಸಭೆಯ ಒಳಗಡೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕ್ರಮ ಗೊಳ್ಳಲು ತೋರಿದ ವಿಳಂಬ ರಾಜ್ಯದಲ್ಲಿ ನಡೆದ ಮತಾಂಧ ಕಿಡಿಗೇಡಿಗಳ ಕೃತ್ಯದ ಬಗ್ಗೆ ಸರ್ಕಾರದ ಮೌನ, ಪಾಕಿಸ್ತಾನ ಧ್ವಜಕ್ಕೆ ಪ್ರೀತಿ ತೋರಿದವರ ವಿರುದ್ಧ ಕ್ರಮ ಜರುಗಿಸಲು ನಿರ್ಲಕ್ಷ್ಯ ಗಳ ಪರಿಣಾಮವಾಗಿ ಮಂಗಳೂರಿನ ಕುಡುಪಿನಲ್ಲಿ ದೇಶದ್ರೋಹಿಗೆ ಪಾಕಿಸ್ತಾನ ಜಿಂದಾಬಾದ್ ಕೂಗುವ ಧೈರ್ಯ ಬಂದಿದೆ‌. ಅಲ್ಲಿ‌ನಡೆದ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆಯು ಅಮಾಯಕರನ್ನು ಬಂದಿಸಿರುವುದು, ಮನೆಗಳಿಗೆ ದಾಳಿ ನಡೆಸುತ್ತಿರುವುದು ಕಾಂಗ್ರೆಸ್ ನ‌ ಕುಮ್ಮಕ್ಕಿ ನಿಂದ ನಡೆಯುತ್ತಿದೆ. ಇಂತಹ ಘಟನೆಗಳಿಂದ ದೇಶಭಕ್ತರು ರೋಷ ಗೊಂಡಿದ್ದಾರೆ. ಸರ್ಕಾರ ಸಂಪೂರ್ಣವಾಗಿ ಮತಾಂಧರ ಪರವಾಗಿಯೇ ಇರುವಂತಹ ಭಾವನೆ ಜನಸಾಮಾನ್ಯರಲ್ಲಿ ಮೂಡಿದೆ. ಮಂಗಳೂರಿನ ಕುಡುಪು ಪರಿಸರದ ಘಟನೆಯನ್ನು ಕಾಂಗ್ರೆಸ್ ರಾಜಕೀಯ ದುರುದ್ದೇಶಕ್ಕಾಗಿ ಬಳಸುತ್ತಿದೆ. ಪೊಲೀಸ್ ಇಲಾಖೆಯನ್ನು ಕೈಗೊಂಬೆಯಾಗಿಸುತ್ತಿದೆ. ಇದನ್ನು ಭಾರತೀಯ ಜನತಾ ಪಾರ್ಟಿಯು ಸಹಿಸಲು ಸಾಧ್ಯವಿಲ್ಲ, ಶಾಂತಿಯುತ ದಕ್ಷಿಣ ಕನ್ನಡ ವನ್ನು ಕದಡುವ ಷಡ್ಯಂತ್ರ ನಡೆಯುತ್ತಿದೆ, ಸಂಘಟನೆಯ, ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕುಂಪಲ ಆಗ್ರಹಿಸಿದ್ದಾರೆ.
ಸಂಘ ಪರಿವಾರದ ಕಾರ್ಯಕರ್ತರ ಮನೋಬಲವನ್ನು ಕುಗ್ಗಿಸುವ ಕಾಂಗ್ರೆಸ್ ನ ಭಂಡ ಪ್ರಯತ್ನ ಎಂದಿಗೂ ಯಶಸ್ವಿಯಾಗದು. ಕುಡುಪು ಪ್ರಕರಣದ ಬಗ್ಗೆ ಕೂಲಂಕುಷವಾದ ತನಿಖೆಯಾಗ ಬೇಕಿದೆ. ಪೊಲೀಸ್ ಇಲಾಖೆ ಕಾಂಗ್ರೆಸ್ ನ ಕಪಿಮುಷ್ಠಿಯಲ್ಲಿದೆ ಎನ್ನುವುದನ್ನು ಕಳಚಿಸುವ ದಿಟ್ಟತನ ಪೊಲೀಸರಿಂದ ಆಗಬೇಕಿದೆ. ಇಲ್ಲವಾದರೆ ಭವಿಷ್ಯದಲ್ಲಿ ಸಂಭವಿಸುವ ಘಟನೆಗಳಿಗೆ ಇಲಾಖೆಯೇ ಹೊಣೆ ಹೊರೆ ಹೊರಬೇಕಾದೀತು ಎಂದು ಕುಂಪಲ ರವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು