1:29 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಜ್ಞಾನ ಅಂಚೆ ಸೇವೆಗೆ ಚಾಲನೆ

02/05/2025, 20:43

ಬೆಂಗಳೂರು (reporterkarnataka.com): ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗಳ ಪ್ರದೇಶಗಳಿಗೂ ಕೈಗೆಟುಕುವಂತೆ ಮಾಡುವ ಗುರಿಯೊಂದಿಗೆ ಭಾರತೀಯ ಅಂಚೆ ಇಲಾಖೆಯ ಪ್ರಾರಂಭಿಸಿರುವ ಹೊಸ ಸೇವೆ ‘ಜ್ಞಾನ ಅಂಚೆ ‘ ಗೆ ಇಂದು ಬೆಂಗಳೂರಿನ ರಾಜಾಜಿನಗರ ಪ್ರಧಾನ ಅಂಚೆ ಕಚೇರಿಯಲ್ಲಿಂದು ಪಶ್ಚಿಮ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಯು.ಸೂರ್ಯ ಚಾಲನೆ ನೀಡಿದರು.
ಈ ಸೇವೆಯನ್ನು ಇಂದು ಮೇ 1ರಿಂದದೇಶಾದ್ಯಂತ ಎಲ್ಲಾ ಇಲಾಖಾ ಅಂಚೆ ಕಚೇರಿಗಳ ಮೂಲಕ ಲಭ್ಯವಿರುತ್ತದೆ. ಈ ಸೇವೆಯು ವಿಶೇಷವಾಗಿ ದೂರದ ಮತ್ತು ಸೇವಾ ವಂಚಿತ ಪ್ರದೇಶಗಳಲ್ಲಿ ಕಲಿಕಾ ಸಂಪನ್ಮೂಲಗಳನ್ನು ಹೆಚ್ಚು ಲಭ್ಯವಿರುವಂತೆ ಮಾಡುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ.
ಈ ಸೇವೆಯು ಆಕರ್ಷಕವಾದ ದರ ನೀತಿಯನ್ನು ಒಳಗೊಂಡಿದ್ದು, 300 ಗ್ರಾಂ ತೂಕದ ಪ್ಯಾಕೆಟ್‌ಗಳಿಗೆ ಕೇವಲ ₹20 ರಿಂದ ಪ್ರಾರಂಭವಾಗುವ ದರಗಳು. 5 ಕಿಲೋಗ್ರಾಂಗಳಷ್ಟು ಭಾರವಾದ ಪ್ಯಾಕೇಜ್‌ಗಳಿಗೆ, ಗರಿಷ್ಠ ಶುಲ್ಕ ₹100 ಆಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು