8:54 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಜ್ಞಾನ ಅಂಚೆ ಸೇವೆಗೆ ಚಾಲನೆ

02/05/2025, 20:43

ಬೆಂಗಳೂರು (reporterkarnataka.com): ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಪುಸ್ತಕಗಳನ್ನು ದೇಶದ ಮೂಲೆ ಮೂಲೆಗಳ ಪ್ರದೇಶಗಳಿಗೂ ಕೈಗೆಟುಕುವಂತೆ ಮಾಡುವ ಗುರಿಯೊಂದಿಗೆ ಭಾರತೀಯ ಅಂಚೆ ಇಲಾಖೆಯ ಪ್ರಾರಂಭಿಸಿರುವ ಹೊಸ ಸೇವೆ ‘ಜ್ಞಾನ ಅಂಚೆ ‘ ಗೆ ಇಂದು ಬೆಂಗಳೂರಿನ ರಾಜಾಜಿನಗರ ಪ್ರಧಾನ ಅಂಚೆ ಕಚೇರಿಯಲ್ಲಿಂದು ಪಶ್ಚಿಮ ವಿಭಾಗದ ಹಿರಿಯ ಅಂಚೆ ಅಧೀಕ್ಷಕಿ ಯು.ಸೂರ್ಯ ಚಾಲನೆ ನೀಡಿದರು.
ಈ ಸೇವೆಯನ್ನು ಇಂದು ಮೇ 1ರಿಂದದೇಶಾದ್ಯಂತ ಎಲ್ಲಾ ಇಲಾಖಾ ಅಂಚೆ ಕಚೇರಿಗಳ ಮೂಲಕ ಲಭ್ಯವಿರುತ್ತದೆ. ಈ ಸೇವೆಯು ವಿಶೇಷವಾಗಿ ದೂರದ ಮತ್ತು ಸೇವಾ ವಂಚಿತ ಪ್ರದೇಶಗಳಲ್ಲಿ ಕಲಿಕಾ ಸಂಪನ್ಮೂಲಗಳನ್ನು ಹೆಚ್ಚು ಲಭ್ಯವಿರುವಂತೆ ಮಾಡುವ ಮೂಲಕ ಶೈಕ್ಷಣಿಕ ಅಂತರವನ್ನು ಕಡಿಮೆ ಮಾಡುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ.
ಈ ಸೇವೆಯು ಆಕರ್ಷಕವಾದ ದರ ನೀತಿಯನ್ನು ಒಳಗೊಂಡಿದ್ದು, 300 ಗ್ರಾಂ ತೂಕದ ಪ್ಯಾಕೆಟ್‌ಗಳಿಗೆ ಕೇವಲ ₹20 ರಿಂದ ಪ್ರಾರಂಭವಾಗುವ ದರಗಳು. 5 ಕಿಲೋಗ್ರಾಂಗಳಷ್ಟು ಭಾರವಾದ ಪ್ಯಾಕೇಜ್‌ಗಳಿಗೆ, ಗರಿಷ್ಠ ಶುಲ್ಕ ₹100 ಆಗಿರುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು