3:45 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ ವೇದಿಕೆಯಲ್ಲಿ!: ಅಕ್ಕಪಕ್ಕ ಕೂತ ಉಭಯ ನಾಯಕರು!!

02/05/2025, 21:35

ತಿರುವನಂತಪುರಂ(reporterkarnataka.com): ಸೈದ್ದಾಂತಿಕವಾಗಿ ಉತ್ತರ ಮತ್ತು ದಕ್ಷಿಣ ಧ್ರುವದಂತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಒಂದೇ ವೇದಿಕೆಯಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡರು. ಅಕ್ಕಪಕ್ಕ ಕೂತಿರುವ ಉಭಯ ನಾಯಕರು ಕೈಹಿಡಿದು ಕೊಂಡು ಏನೋ ಮಾತನಾಡಿದರು.
ಇದೆಲ್ಲ ನಡೆದಿರುವುದು ಕೇರಳದ ತಿರುವನಂತಪುರದಲ್ಲಿ ಅದಾನಿ ಸಮೂಹ ಸಂಸ್ಥೆ ಅಭಿವೃದ್ಧಿಪಡಿಸಿರುವ ವಿಳಿಂಜಂ ಬಂದರು ಉದ್ಘಾಟನೆ ಸಮಾರಂಭದಲ್ಲಿ.
ಬಂದರಿನ ಮೊದಲ ಹಂತದ ಸೌಲಭ್ಯವನ್ನು ಪ್ರಧಾನಿ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಹಸ್ತಾಂತರಿಸಿದರು.
ವಿಳಿಂಜಂ ಬಂದರಿನ ಎರಡನೇ ಹಂತದ ಯೋಜನೆಗೂ ಮೋದಿ ಚಾಲನೆ ನೀಡಿದರು.
ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಭಾರತದ ಮೊದಲ ಟ್ರಾನ್ಸ್​​ಶಿಪ್​​ಮೆಂಟ್ ಪೋರ್ಟ್ (ಹಡಗಿನಿಂದ ಹಡಗಿಗೆ ಸರಕು ಸಾಗಿಸುವ ಬಂದರು) ಆಗಿದೆ. ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ಹಡಗು ಸಾಗಣೆಯಲ್ಲಿ ಭಾರತಕ್ಕೆ ಒಂದು ಮಹತ್ವದ ಪಾತ್ರ ಸಿಕ್ಕಂತಾಗುತ್ತದೆ. ಈ ಯೋಜನೆಯು ನವಯುಗದ ಅಭಿವೃದ್ಧಿಯ ಸಂಕೇತ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಅದಾನಿ ಸಮೂಹಕ್ಕೆ ಸೇರಿದ ಅದಾನಿ ಪೋರ್ಟ್ಸ್ (ಎಪಿಎಸ್​​ಇಝಡ್) ಈ ಆಳ ನೀರಿನ ಬಂದರನ್ನು ಅಭಿವೃದ್ಧಿಪಡಿಸಿದೆ. ಸರ್ಕಾರ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ನಡೆದ ಈ ಯೋಜನೆಯ ವೆಚ್ಚ ₹8,000 ಕೋಟಿ ಆಗಿದೆ.
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ತಿರುವನಂತಪುರದ ಕಾಂಗ್ರೆಸ್‌ ಸಂಸದ ಶಶಿ ತರೂರ್ ವೇದಿಕೆಯಲ್ಲಿದ್ದರು.
(ಚಿತ್ರ ಕೃಪೆ: ಮಾತೃಭೂಮಿ)
.

ಇತ್ತೀಚಿನ ಸುದ್ದಿ

ಜಾಹೀರಾತು