7:55 PM Thursday14 - August 2025
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ: ಎಲ್ಲರನ್ನೂ ಹಿಂದಿಕ್ಕಿದ ಕ್ರೈಸ್ ವಸತಿ ಶಾಲೆಗಳು; ಹಾಗಾದರೆ ಏನಿದು ಕ್ರೈಸ್ ?

03/05/2025, 21:49

ಬೆಂಗಳೂರು(reporterkarnataka.com): ರಾಜ್ಯಾದ್ಯಂತ 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶವು ಪ್ರಕಟಗೊಂಡಿದ್ದು, ರಾಜ್ಯದ ಶೇಕಡಾವಾರು ಫಲಿತಾಂಶವು 62.34 ರಷ್ಟಿರುವ ವೇಳೆಯಲ್ಲೇ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವಂತಹ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಶಾಲೆಗಳು ಮಾತ್ರ ಗಣನೀಯ ಸಾಧನೆ ಮಾಡಿದ್ದು ಸುಮಾರು 91% ಫಲಿತಾಂಶ ಸಾಧನೆ ಮಾಡಿದೆ.
ಇದು ಸರ್ಕಾರದ ಇತರೆ ಶಾಲೆಗಳು ಮತ್ತು ಅನುದಾನ ರಹಿತ ಖಾಸಗೀ ಶಾಲೆಗಳಿಗಿಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮಕ್ಕಳು ಸುಮಾರು 28% ನಷ್ಟು ಫಲಿತಾಂಶವಾರು ಸಾಧನೆ ಮಾಡಿದ್ದಾರೆ.

*ಏನಿದು ಕ್ರೈಸ್ :*
ಕ್ರೈಸ್ ಎಂಬುದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವಾಗಿದ್ದು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿ ಶಿಕ್ಷಣವನ್ನು ನೀಡುವ ಸಂಸ್ಥೆಯಾಗಿದೆ.
ವಿಶೇಷವೆಂದರೆ ಸಮಾಜದಲ್ಲಿ ಅತ್ಯಂತ ಕೆಳಸ್ಥರದಲ್ಲಿರುವ ಅಲೆಮಾರಿಗಳು, ಪೌರಕಾರ್ಮಿಕರು, ಮಾಜಿ ದೇವದಾಸಿಯರ ಮಕ್ಕಳು, ಜೀತ ಮುಕ್ತ ಮಕ್ಕಳು, ವಿಕಲಾಂಗರು, ಸ್ಮಶಾನ ಕಾರ್ಮಿಕರು, ಏಕ ಪೋಷಕರು, ಚಿಂದಿ ಆಯುವವರ ಮಕ್ಕಳು ಮತ್ತು ಇನ್ನಿತರೆ ದುರ್ಬಲ ವರ್ಗದ ಮಕ್ಕಳಿಗೆ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೇ ನೇರವಾಗಿ ಶಾಲಾ ದಾಖಲಾತಿಯನ್ನು ನೀಡುತ್ತಿರುವ ಈ ಶಾಲೆಗಳು ಬಹಳಷ್ಟು ವೈಶಿಷ್ಟ್ಯವನ್ನು ಹೊಂದಿವೆ.
ಈ ವಸತಿ ಶಾಲೆಗಳಲ್ಲಿ ಲಕ್ಷಾಂತರ ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಿದ್ದು ತಮ್ಮ ಗುಣಮಟ್ಟದ ಕಾರಣಕ್ಕೆ ಈ ವಸತಿ ಶಾಲೆಗಳು ಕ್ರಮೇಣ ಜನಪ್ರಿಯತೆಯನ್ನು ಗಳಿಸುತ್ತಿವೆ.
ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾದ ಕ್ರೈಸ್ ವಸತಿ ಶಾಲೆಯ ಸುಮಾರು 34984 ಮಂದಿ ವಿದ್ಯಾರ್ಥಿಗಳ ಪೈಕಿ 31726 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಈ ಪೈಕಿ 34.10% ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು 55.90% ಶೇಕಡಾ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಸರಾಸರಿ ಶೇಕಡಾವಾರು ಅಂಕಗಳನ್ನು ಗಮನಿಸಿದಾಗ ಅದು 78% ಇದ್ದು ಕ್ರೈಸ್ ವಸತಿ ಶಾಲೆ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಸಚಿವ ಡಾ. ಎಚ್. ಸಿ. ಮಹದೇವಪ್ಪನವರು
ನಮ್ಮ ವಸತಿ ಶಾಲೆಯ ಮಕ್ಕಳ ಶೈಕ್ಷಣಿಕ ಸಾಧನೆಯು ರಾಜ್ಯದ ಇತರೆ ಶಾಲಾ ಮಕ್ಕಳಿಗಿಂತಲೂ ಉತ್ತಮವಾಗಿದ್ದು, ಸಾಮಾಜಿಕ ನ್ಯಾಯ ಸಾಧನೆಗೆ ಶಿಕ್ಷಣವನ್ನೇ ಅಸ್ತ್ರವನ್ನಾಗಿ ನಾವು ಬಳಸುತ್ತಿದ್ದೇವೆ ಎಂದು ಹೇಳಿದರು.
ಇನ್ನು ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾರ್ಯ ನಿರ್ವಾಹಕ ನಿರ್ದೇಶಕರಾದ ಕಾಂತರಾಜು ಅವರು ” ಈ ಬಾರಿ ನಮ್ಮ ವಸತಿ ಶಾಲೆಯ ಫಲಿತಾಂಶವು ಇತರರಿಗಿಂತ ಬಹಳಷ್ಟು ಉತ್ತಮವಾಗಿದ್ದು ಒಟ್ಟಾರೆ 91% ಸಾಧನೆ ಮಾಡಿದ್ದೇವೆ. ಮುಂಬರುವ ವರ್ಷದಲ್ಲಿ 100% ಶೈಕ್ಷಣಿಕ ಸಾಧನೆಯು ನಮ್ಮ ಆದ್ಯ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು