7:19 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

Chikkamagaluru | ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಬಿಗಿ ಭದ್ರತೆ: ಕಟ್ಟುನಿಟ್ಟಿನ ವಾಹನ ತಪಾಸಣೆ

03/05/2025, 21:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ(reporterkarnataka.com): ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮರ್ಡರ್‌ನ ನಂತರ ರಾಜ್ಯದಲ್ಲಿ ಭದ್ರತಾ ಕ್ರಮಗಳು ತೀವ್ರಗೊಂಡಿದ್ದು, ಚಿಕ್ಕಮಗಳೂರು ಗಡಿಭಾಗವಾದ ಕೊಟ್ಟಿಗೆಹಾರ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಪೊಲೀಸ್ ಭದ್ರತೆ ಜಾರಿಯಲ್ಲಿದೆ.
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಗಡಿಭಾಗದ ಪ್ರಮುಖ ಪ್ರವೇಶ ಬಾಗಿಲಾದ ಕೊಟ್ಟಿಗೆಹಾರದಲ್ಲಿ ಇದೀಗ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದೆ. ಗಸ್ತು ಕಾರ್ಯಾಚರಣೆ ಹೆಚ್ಚಳಗೊಂಡಿದ್ದು, ಶಂಕಿತ ವಾಹನಗಳು ಹಾಗೂ ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗುತ್ತಿದೆ.

ಬಣಕಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ತಪಾಸಣಾ ಚಟುವಟಿಕೆ ಗಡಿಭಾಗದ ಶಾಂತಿಯುತ ಪರಿಸರವನ್ನು ಕಾಪಾಡಲು ಉದ್ದೇಶಿತವಾಗಿದೆ. “ನಮ್ಮ ಗಡಿಭಾಗವು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಮಾದರಿ ಆಗಬೇಕು. ಯಾವುದೇ ಬಾಹ್ಯ ಅಶಾಂತಿ ಜಿಲ್ಲೆಗೆ ಪ್ರವೇಶಿಸದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ,” ಎಂದು ಅವರು ತಿಳಿಸಿದ್ದಾರೆ.
ಈ ಕ್ರಮದ ಭಾಗವಾಗಿ ಸಾರ್ವಜನಿಕರನ್ನು ಸಹ ಸಹಕಾರ ನೀಡುವಂತೆ ಪೊಲೀಸರು ವಿನಂತಿಸಿದ್ದಾರೆ. ಜಿಲ್ಲೆಯ ಶಾಂತಿಯನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು