2:02 PM Sunday4 - May 2025
ಬ್ರೇಕಿಂಗ್ ನ್ಯೂಸ್
Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ… ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್… ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಸ್ ಬರುವುದು ಕೇವಲ… Vijayapura | ಸಚಿವ ಜಮೀರ್‌ ಸುಮ್ಮನಿದ್ದರೆ ಸಾಕು, ಅದೇ ದೊಡ್ಡ ದೇಶ ಸೇವೆ:… ತನಿಖೆಯ ಮುನ್ನವೇ ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್; ಸ್ಪೀಕರ್ ಖಾದರ್ ತಕ್ಷಣ ರಾಜೀನಾಮೆ… Chikkamagaluru | ಪೆಹಲ್ಗಾಮ್ ದಾಳಿ: ಆಲ್ದೂರು ಪಟ್ಟಣ ಬಂದ್; ವ್ಯಾಪಾರ-ವಹಿವಾಟು ಸ್ತಬ್ದ; ವಾರದ… Kerala | ಪ್ರಧಾನಿ ಮೋದಿ – ಕೇರಳ ಸಿಎಂ ಪಿಣರಾಯಿ ವಿಜಯನ್ ಒಂದೇ… Karnataka High Court | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಗೆ ಅಶ್ಲೀಲ ಪದ… ಅಲ್ಲಪಟ್ಟಣದಿಂದ ಮೆಲ್ಲ ಮೆಲ್ಲನೇ ಬಂದೆ…ರಾಮೇಶ್ವರಾ…ಅನ್ನದಾನೇಶ್ವರಾ: ಮನೆ ದೇವರ ಲಾವಣಿ ಹಾಡಿದ ಸಿಎಂ ಸಿದ್ದರಾಮಯ್ಯ Chikkamagaluru | ಜಯಪುರ ಅತ್ತಿಕುಡಿಗೆ ರಸ್ತೆ ಬದಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

ಶಾಂತಿಗಾಗಿ ಪ್ರಯತ್ನಿಸಿದ್ದೇನೆ ಹೊರತು ಯಾರ ಪರವೂ ಇಲ್ಲ, ಯಾರ ವಿರುದ್ದವೂ ಇಲ್ಲ: ಸ್ಪೀಕರ್ ಖಾದರ್ ಸ್ಪಷ್ಟನೆ

04/05/2025, 13:58

ಮಂಗಳೂರು(reporterkarnataka.com): ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವು, ಕೊಲೆಯ ಹಿಂದೆ ಮತೀಯ ಕಾರಣವಿದೆಯೆಂಬ ವದಂತಿಗಳಿಂದ, ಸ್ಥಳೀಯ ಮಟ್ಟದಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನುಂಟು ಮಾಡಿತ್ತು. ಆಗ ನಾನು ಮಾಧ್ಯಮದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ, ಈ ಘಟನೆ ರೌಡಿಗಳ ನಡುವಿನ ಗ್ಯಾಂಗ್ ವಾರ್ ಆಗಿರಬಹುದೆಂಬ ಶಂಕೆಯನ್ನು ವ್ಯಕ್ತಪಡಿಸಿದ್ದೇನೆ. ಜೊತೆಗೆ, ಆರೋಪಿಗಳ ಬಂಧನದ ನಂತರವೇ ಈ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಬೆಳಕಿಗೆ ಬರುತ್ತದೆ ಎಂದು ನಾನು ಸ್ಪಷ್ಟವಾಗಿ ಹೇಳಿದ್ದೆ ಎಂದು ವಿಧಾನಸಭೆ ಸ್ಪೀಕರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ನಡೆದ ಕೂಡಲೇ, ಅದು ‘ಫಾಝಿಲ್ ಹತ್ಯೆಗೆ ಪ್ರತೀಕಾರ’ ಎಂಬ ಸುದ್ದಿ ಹಬ್ಬುತ್ತಿದ್ದಂತೆ, ಫಾಝಿಲ್ ತಂದೆ ಮತ್ತು ಸಹೋದರರು ನನಗೆ ಕಾಲ್ ಮಾಡಿ ಈ ಘಟನೆಯಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದನ್ನು, ನಾನು ಮಾಧ್ಯಮದೊಂದಿಗೆ ಉಲ್ಲೇಖ ಮಾಡಿದ್ದೆನೇ* ಹೊರತು, ಈ ಕೃತ್ಯದಲ್ಲಿ ಅವರ ಪಾತ್ರವಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಜೊತೆಗೆ, ಅದೇ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಹಂತಕರ ಬಂಧನಕ್ಕೆ ಪ್ರಯತ್ನಿಸುತ್ತಿದ್ದು, ಬಂಧನದ ನಂತರ, ವಿಚಾರಣೆಯ ಮೂಲಕ ಈ ಕೃತ್ಯದಲ್ಲಿ ಯಾರೆಲ್ಲಾ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶಾಮೀಲಾಗಿದ್ದಾರೆ ಎಂದು ತಿಳಿದು ಬರಲಿದೆ ಹಾಗೂ ಅಪರಾಧಿಗಳಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡಲಾಗುವುದು ಎಂಬುದನ್ನೂ ಸ್ಪಷ್ಟಪಡಿಸಿದ್ದೆ ಎಂದು ತಿಳಿಸಿದ್ದಾರೆ.
ಘಟನೆ ನಡೆದ ಬಳಿಕ, ಆರೋಪಿಗಳ ಬಂಧನಕ್ಕೆ ಮುಂಚೆಯೇ ಪ್ರಕರಣವನ್ನು ಕೋಮು ದೃಷ್ಟಿಯಲ್ಲಿ ಚಿತ್ರೀಕರಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಎರಡು ಧರ್ಮಗಳ ನಡುವೆ ಗಲಭೆ ಎಬ್ಬಿಸಿ, ರಾಜಕೀಯ ಲಾಭ ಪಡೆಯಲು ಸ್ಥಳೀಯ ನಾಯಕರು ಪ್ರಯತ್ನಿಸುತ್ತಿದ್ದರು. ಅಂತಹ ಸಮಯದಲ್ಲಿ,ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡಲು ನಾನು ಪ್ರಯತ್ನಿಸಿದ್ದೇನೆಯೇ ಹೊರತು, ಯಾರ ಪರವಾಗಿಯೂ ಆಗಲಿ, ಯಾರ ವಿರೋಧವಾಗಿಯೂ ಆಗಲಿ ಮಾತನಾಡುವ ಉದ್ದೇಶ ನನ್ನದಾಗಿರಲಿಲ್ಲ ಎಂದು ಖಾದರ್ ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣದಲ್ಲಿ ರಾಜಕೀಯ ಲಾಭ ಪಡೆಯಲು ವಿಫಲವಾದವರು ನನ್ನ ಹೇಳಿಕೆಯನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ ವ್ಯಾಖ್ಯಾನಿಸಿ ಅಪಪ್ರಚಾರ ಮಾಡುತ್ತಿರುವುದು ಅವರ ಅಜ್ಞಾನದ ಸಂಕೇತವಷ್ಟೇ ಅಲ್ಲ, ಅದು ಜನಪ್ರತಿನಿಧಿಗಳ ಜವಾಬ್ದಾರಿ ಮತ್ತು ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇಂತಹ ವ್ಯಾಖ್ಯಾನಗಳು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಪ್ರಯತ್ನವೇ ಹೊರತು ಇದರಿಂದ ಯಾರಿಗೂ ಪ್ರಯೋಜನವಿಲ್ಲ. ಹಾಗಾಗಿ ಇಂತಹ ಕಠಿಣ ಸನ್ನಿವೇಶದಲ್ಲಿ ಎಲ್ಲರೂ ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟು, ಜವಾಬ್ದಾರಿಯುತವಾಗಿ ನಡೆದುಕೊಂಡು ಸಮಾಜದಲ್ಲಿ ಶಾಂತಿ ಸಾಮರಸ್ಯ ಕಾಪಾಡಲು ಪ್ರಯತ್ನಿಸಬೇಕೆಂದು ನಾನು ವಿನಂತಿಸುತ್ತಿದ್ದೇನೆ. ಜಿಲ್ಲೆಯ ಶಾಂತಿ ಹಾಗೂ ಅಭಿವೃದ್ದಿ ಬಯಸುವ ಜನರಿಗೆ ಸ್ಪಷ್ಟೀಕರಣ ಎಂದು ಖಾದರ್ ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು