3:49 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ ಅಕ್ಕನ ಮಗನಿಂದಲೇ ಹತ್ಯೆ?

04/05/2025, 14:02

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೋಗಂಡಬಾವಿ ಗ್ರಾಮದಲ್ಲಿ ಇತ್ತೀಚಿಗೆ ನಡೆದ ಗೌಡಪ್ಪ ಚವಾನವಾವಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದೆ. ಕೊಲೆಗೀಡಾದ ವ್ಯಕ್ತಿಯ ಅಪ್ರಾಪ್ತ ವಯಸ್ಸಿನ ಅಕ್ಕನ ಮಗನೇ ಈ ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿದೆ.
ಕೊಲೆ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಈ ಅಂಶವನ್ನು ಪತ್ತೆ ಹಚ್ಚಿದ್ದಾರೆ. ಯಾದಗಿರಿ ಎಸ್‌ಪಿ ಅವರ ಆದೇಶದಂತೆ ಸಿಪಿಐ ರವಿಕುಮಾರ್ ತನಿಖೆ ಕೈಗೊಂಡಿದ್ದರು.
ಮೃತ ವ್ಯಕ್ತಿಯ ಪತ್ನಿ ರೇಣುಕಮ್ಮ ಅವರು ಈ ಮುನ್ನ
ನೀಡಿದ ದೂರಿನ ಮೇರೆಗೆ ಏಪ್ರಿಲ್ 22ರಂದು ಹಳೆಯ ವೈರತ್ವದ ವಿಚಾರವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕುರಿತು ತನಿಖೆ ಮುಂದುವರೆಸಿದಾಗ ನೈಜ ವಿಚಾರ ಬೆಳಕಿಗೆ ಬಂದಿದೆ.
ಮೃತರ ಅಕ್ಕನ ಮಗ 14 ವರ್ಷದ ಬಾಲಕ ಈ ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದು ಬಂದಿದೆ.
ಅಳಿಯ ಮತ್ತು ಮಾವನ ಮಧ್ಯೆ ಯಾವುದೋ ವಿಷಯಕ್ಕೆ ಜಗಳವಾಗಿ ಮಾವನ ತಲೆಗೆ ಅಳಿಯ
ಹಿಂಬದಿಯಿಂದ ಬಡಿಗೆಯಲ್ಲಿ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವಕ್ಕೊಳಗಾಗಿ ಗೌಡಪ್ಪ ಅವರು ಮೃತಪಟ್ಟಿದ್ದರು.
ಅದರೆ ಈ ವಿಚಾರವನ್ನು ಬಾಲಕನ ಮನೆ ಮಂದಿ ಮುಚ್ಚಿಟ್ಟು ಕಟ್ಟು ಕತೆ ಸೃಷ್ಟಿಸಿದ್ದರು. ಈ ಘಟನೆ
ಏಪ್ರಿಲ್ 19ರಂದು ರಾತ್ರಿ 9 ಗಂಟೆ ನಡೆದಿದೆ. ನಂತರ
ಬಾಗಲಕೋಟ ಆಸ್ಪತ್ರೆಯಿಂದ ಶವ ತಂದು ಪೊಲೀಸ್ ಠಾಣೆ ಮುಂದಿಟ್ಟು ಪ್ರತಿಭಟನೆ ನಡೆದಿದ್ದಾರೆ. ಪೊಲೀಸರೇ ಆರೋಪಿಗಳ ಎಂಬುವಂತೆ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು