2:23 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬಂಟ್ವಾಳ ವಕೀಲರ ಸಂಘ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆ: ದಯಾನಂದ ರೈ ಉಪಾಧ್ಯಕ್ಷ

04/05/2025, 14:03

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ವಕೀಲರ ಸಂಘದ 2025-27ನೇ ಸಾಲಿನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆಗೊಂಡಿದ್ದಾರೆ.
ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ
ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ. ಸ್ಪರ್ಧೆ ಮಾಡಿ ಬಹುಮತದಿಂದ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ. ಅವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ಪ್ರತಿಸ್ಪರ್ಧಿಯಾಗಿ ಪೈಪೋಟಿ ನೀಡಿದ ರಾಜೇಶ್ ಬೊಳ್ಳುಕಲ್ಲು 95 ಮತಗಳನ್ನು ಪಡೆಯಲು ಸಮರ್ಥರಾದರು. ವಕೀಲರಾದ ಎಚ್. ಸತೀಶ್ ರಾವ್ ಅವರು ಮುಖ್ಯ ಚುನಾವಣಾಧಿಕಾರಿಯಾಗಿದ್ದರು ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ಉಪ ಚುನಾವಣಾಧಿಕಾರಿಗಳಾಗಿ, ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರ ಮೇಲುಸ್ತುವಾರಿಯಾಗಿ ಚುನಾವಣಾ ಪ್ರಕ್ರಿಯೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು