7:42 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಬಂಟ್ವಾಳ ವಕೀಲರ ಸಂಘ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆ: ದಯಾನಂದ ರೈ ಉಪಾಧ್ಯಕ್ಷ

04/05/2025, 14:03

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ವಕೀಲರ ಸಂಘದ 2025-27ನೇ ಸಾಲಿನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆಗೊಂಡಿದ್ದಾರೆ.
ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ
ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ. ಸ್ಪರ್ಧೆ ಮಾಡಿ ಬಹುಮತದಿಂದ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ. ಅವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ಪ್ರತಿಸ್ಪರ್ಧಿಯಾಗಿ ಪೈಪೋಟಿ ನೀಡಿದ ರಾಜೇಶ್ ಬೊಳ್ಳುಕಲ್ಲು 95 ಮತಗಳನ್ನು ಪಡೆಯಲು ಸಮರ್ಥರಾದರು. ವಕೀಲರಾದ ಎಚ್. ಸತೀಶ್ ರಾವ್ ಅವರು ಮುಖ್ಯ ಚುನಾವಣಾಧಿಕಾರಿಯಾಗಿದ್ದರು ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ಉಪ ಚುನಾವಣಾಧಿಕಾರಿಗಳಾಗಿ, ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರ ಮೇಲುಸ್ತುವಾರಿಯಾಗಿ ಚುನಾವಣಾ ಪ್ರಕ್ರಿಯೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು