12:18 PM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಬಂಟ್ವಾಳ ವಕೀಲರ ಸಂಘ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆ: ದಯಾನಂದ ರೈ ಉಪಾಧ್ಯಕ್ಷ

04/05/2025, 14:03

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಬಂಟ್ವಾಳ ವಕೀಲರ ಸಂಘದ 2025-27ನೇ ಸಾಲಿನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆಗೊಂಡಿದ್ದಾರೆ.
ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ
ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಮರು ಆಯ್ಕೆ ಬಯಸಿ ರಿಚರ್ಡ್ ಕೋಸ್ತಾ ಎಂ. ಸ್ಪರ್ಧೆ ಮಾಡಿ ಬಹುಮತದಿಂದ ಎರಡನೇ ಬಾರಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರಧಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಚನಾವಣೆಗಾಗಿ 244 ಅರ್ಹ ಮತದಾರರ ಪಟ್ಟಿಯಲ್ಲಿ 222 ಮತಗಳು ಚಲಾವಣೆ ಯಾಗಿದ್ದು ರಿಚರ್ಡ್ ಕೋಸ್ತಾ ಎಂ. ಅವರು 123 ಮತಗಳನ್ನು ಪಡೆದು ಜಯ ಗಳಿಸಿರುತ್ತಾರೆ. ಪ್ರತಿಸ್ಪರ್ಧಿಯಾಗಿ ಪೈಪೋಟಿ ನೀಡಿದ ರಾಜೇಶ್ ಬೊಳ್ಳುಕಲ್ಲು 95 ಮತಗಳನ್ನು ಪಡೆಯಲು ಸಮರ್ಥರಾದರು. ವಕೀಲರಾದ ಎಚ್. ಸತೀಶ್ ರಾವ್ ಅವರು ಮುಖ್ಯ ಚುನಾವಣಾಧಿಕಾರಿಯಾಗಿದ್ದರು ಕೆ. ವಿ. ಭಟ್ ಮತ್ತು ಎಂ. ವಿ. ಭಟ್ ಉಪ ಚುನಾವಣಾಧಿಕಾರಿಗಳಾಗಿ, ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರ ಮೇಲುಸ್ತುವಾರಿಯಾಗಿ ಚುನಾವಣಾ ಪ್ರಕ್ರಿಯೆ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು