3:26 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ ವ್ಯಾಘ್ರ

06/05/2025, 17:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದೆ. ಕಾಡಾನೆ, ಕಾಡುಕೋಣಗಳ ಉಪಟಳದ ನಡುವೆ ಇದೀಗ ಮೂಡಿಗೆರೆ ಪಟ್ಟಣದ ಸಮೀಪವೇ ಹಸುವೊಂದನ್ನು ಹುಲಿ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಮೂಡಿಗೆರೆ ಪಟ್ಟಣಕ್ಕೆ ಹೊಂದಿಕೊಂಡಂತೆ ಇರುವ ಕುನ್ನಹಳ್ಳಿ ಗ್ರಾಮದಲ್ಲಿ ಹುಲಿದಾಳಿಗೆ ಹಸು ಬಲಿಯಾಗಿದೆ. ಕುನ್ನಹಳ್ಳಿ ಗ್ರಾಮದ ಕೃಷಿಕ ಹಳೇಮೂಡಿಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೆ.ಆರ್.ಶಿವಾನಂದ ಅವರ ಭತ್ತದ ಗದ್ದೆಯಲ್ಲಿ ಭಾನುವಾರ ಹಸುವೊಂದರ ಕಳೆಬರ ಪತ್ತೆಯಾಗಿತ್ತು. ಪರಿಶೀಲಿಸಲಾಗಿ ಅದು ಗ್ರಾಮದ ಕೆ.ಸಿ.ಪ್ರದೀಪ್ ಎಂಬುವವರ ಸಿಂಧಿ ಹಸುವಾಗಿತ್ತು. ಸ್ಥಳದಲ್ಲಿ ಹುಲಿ ಹೆಜ್ಜೆ ಹೋಲುವ ಗುರುತುಗಳು ಕಂಡಬಂದಿದ್ದರಿಂದ ಅನುಮಾನಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಮೂಡಿಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶುಸಂಗೋಪನಾ ಇಲಾಖೆ ವೈದ್ಯರು ಆಗಮಿಸಿ ಪರಿಶೀಲನೆ ನಡೆಸಿದಾಗ ಇದು ಹುಲಿ ಹೆಜ್ಜೆ ಎಂಬುದು ಖಚಿತವಾಗಿದ್ದು, ಹುಲಿದಾಳಿಯಿಂದ ಹಸು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಹಸುವಿನ ಕುತ್ತಿಗೆ ಭಾಗದಲ್ಲಿ ಹುಲಿದಾಳಿ ಮಾಡಿರುವ ಗುರುತು ಪತ್ತೆಯಾಗಿದೆ. ಪಶುಸಂಗೋಪನಾ ಇಲಾಖೆ ವೈದ್ಯರು ಹಸುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಸ್ಥಳದಲ್ಲಿ ಅರಣ್ಯ ಇಲಾಖೆ ವತಿಯಿಂದ ಕ್ಯಾಮರಾ ಅಳವಡಿಸಿದ್ದು, ಹುಲಿಯ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಲು ಪ್ರಯತ್ನಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಮೂಡಿಗೆರೆ ಆರ್ ಎಫ್ ಒ ಕಾವ್ಯ, ಡೆಪ್ಯುಟಿ ಆರ್.ಎಫ್.ಒ ಅಶ್ವಥ್, ಬೀಟ್ ಫಾರೆಸ್ಟ್ ಸುಮಂತ್, ಶಿವಶಂಕರ್, ಗ್ರಾಮದ ಮುಖಂಡ ರವಿ ಕುನ್ನಹಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಈ ಭಾಗದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಭಾಗ ಹೆಚ್ಚಿನ ಜನವಸತಿ ಪ್ರದೇಶವಾಗಿದ್ದು, ಕೃಷಿಕರು ಮತ್ತು ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ತೋಟದ ಮಾಲೀಕರು ಮತ್ತು ಕಾರ್ಮಿಕರು ಜಮೀನುಗಳಿಗೆ ತೆರಳಲು ಭಯಪಡುವಂತಾಗಿದೆ. ಅರಣ್ಯ ಇಲಾಖೆ ತಕ್ಷಣ ಕ್ರಮವಹಿಸಿ ಹುಲಿಯನ್ನು ಪತ್ತೆಹಚ್ಚಿ ಸೆರೆಹಿಡಿದು ಬೇರೆಡೆಗೆ ಸಾಗಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು