4:09 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಕ್ರಮ ಗಣಿಗಾರಿಕೆ: ತಿರುಪತಿ ತಿಮ್ಮಪ್ಪನಿಗೆ 45 ಕೋಟಿ ರೂ.ಗಳ ಕಿರೀಟ ಸಮರ್ಪಿಸಿದ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

06/05/2025, 21:30

ಹೈದರಾಬಾದ್(reporterkarnataka.com): ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ
884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಂಗಾವತಿ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
13 ವರ್ಷಗಳ ದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಐಪಿಸಿ ಸೆಕ್ಷನ್ 120B ಜೊತೆಗೆ 420, 409, 468, 471 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆ.13(2) ಜೊತೆಗೆ 13(1)(d) ಅಡಿ ಜನಾರ್ದನ ರೆಡ್ಡಿ ಮೇಲಿನ
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿದೆ.
ಜನಾರ್ದನ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದು, ವಯಸ್ಸು ಮತ್ತು ಸೇವೆ ಹಾಗೂ ಹಾಲಿ ಶಾಸಕ ಎಂಬುದನ್ನು ಪರಿಗಣಿಸಿ ಶಿಕ್ಷೆ ಕಡಿಮೆ ಮಾಡಲು ನ್ಯಾಯಾಲಯಕ್ಕೆ
ಮನವಿ ಮಾಡಿದ್ದರು. ಆದರೆ, ಸಿಬಿಐ ವಿಶೇಷ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ. ಜನಾರ್ದನ ರೆಡ್ಡಿ ಎಸಗಿರುವ ಅಪರಾಧವು ಜೀವಾವಧಿ ಶಿಕ್ಷೆಗೆ ಯೋಗ್ಯವಾದದ್ದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದರಿಂದ ಜನಾರ್ದನ ರೆಡ್ಡಿ ಮತ್ತೆ ಜೈಲು ಸೇರಬೇಕಾಗುತ್ತದೆ.
ಜನಾರ್ದನ ರೆಡ್ಡಿಯವರು ತಿರುಪತಿ ತಿಮ್ಮಪ್ಪನಿಗೆ 45
ಕೋಟಿ ರೂ.ಗಳ ವಜ್ರದ ಕಿರೀಟ ಅರ್ಪಿಸಿರುವುದನ್ನು ಸ್ಮರಿಸಬಹುದು. ಅಪರಾಧ ಎಸಗಿ ಯಾವುದೇ ದೇವರಿಗೆ ಮೊರೆ ಹೋದರೂ ಪ್ರಯೋಜನವಿಲ್ಲ, ಮಾಡಿದ ಕರ್ಮವನ್ನು ಅನುಭವಿಸಲೇ ಬೇಕೆನ್ನುವುದು ತೀರ್ಪಿನಿಂದ ಮತ್ತೊಮ್ಮೆ ಸಾಬೀತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು