8:43 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು