8:08 PM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಲಿಂಗಸಗೂರು: ಚಿತ್ತಾಪೂರ ಗ್ರಾಮಕ್ಕೆ ಕೃಷ್ಣಾ ನದಿ ನೀರು ಕುಡಿಯಲು ಒದಗಿಸಲು ಅಂಬೇಡ್ಕರ್ ಸೇನೆ ಒತ್ತಾಯ

06/05/2025, 21:32

ಶಿವು ರಾಠೋಡ ಲಿಂಗಸಗೂರು ರಾಯಚೂರು

info.reporterkarnataka@gmail.com

ಲಿಂಗಸಗೂರು ತಾಲ್ಲೂಕಿನ ಚಿತ್ತಾಪೂರ ಗ್ರಾಮದಲ್ಲಿ ಬೋರವೇಲ್ ನೀರು ಕುಡಿಯಲು ಯೋಗ್ಯವಿಲ್ಲದ ಕಾರಣ ಗ್ರಾಮದ ಜನರಿಗೆ ಯೋಗ್ಯವಾದ ಕೃಷ್ಣ ನದಿಯ ನೀರನ್ನು ಒದಗಿಸಬೇಕು.
ಎಂದು ಸಹಾಯಕ ಆಯುಕ್ತರಿಗೆ ಅಂಬೇಡ್ಕರ ಸೇನೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕಳೆದ ವರ್ಷ ಬೇಸಿಗೆಯಲ್ಲಿ ಚಿತ್ತಾಪೂರ ಗ್ರಾಮದ ಸಂಪೂರ್ಣ ಜನರಿಗೆ ವಾಂತಿ ಬೇಧಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದರು ಇಡಿ ಕರ್ನಾಟಕ ತುಂಬ ಮಾಧ್ಯಮಗಳಲಿಯು ಸಹ ಪ್ರಸಾರವಾಗಿತ್ತು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕ ಮಟ್ಟದ ಅಧಿಕಾರಿಗಳು ಭೇಟಿ ಮಾಡಿದರು. ಆರೋಗ್ಯ ಇಲಾಖೆಯವರು ಬೋರ್ ನೀರು ಕುಡಿಯಲು ಯೋಗ್ಯವಿಲ್ಲದ ನೀರು ಬಳಸಿದರಿಂದ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹೇಳಿದರು.
ಚಿತ್ತಾಪೂರ ಗ್ರಾಮಸ್ಥರಿಗೆ ಈ ಬೋರವೇಲ್ ನೀರು ಕುಡಿಯುವುದರಿಂದ ಜನರಿಗೆ ಸಾಕಷ್ಟು ಅನಾರೋಗ್ಯದ ಸಮಸ್ಯೆ ಮಂಡಿನೋವು, ಮುಂತಾದ ಸಮಸ್ಯೆಗಳು ಉಂಟಾಗಿವೆ. ಒಂದು ವರ್ಷ ಕಳೆದರು ಸಹ ಗ್ರಾಮಸ್ಥರಿಗೆ ಇನ್ನೂ ಬೋರವೇಲ್ ನೀರು ಕುಡಿಯುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಂಬೇಡ್ಕರ್ ಸೇನೆಯ ಕಾರ್ಯಕರ್ತರು ಆಗ್ರಹಿಸಿದರು.
ಜೆಜೆಎಂ ಮೂಲಕ ಕೊರೆದ ಬೋರವೇಲ್ ನೀರು ಸಹ ಯೋಗ್ಯವಿಲ್ಲ ಕಾಮಗಾರಿಯು ಕಳಪೆಯಾಗಿದ್ದು ಗ್ರಾಮದಲ್ಲಿ ಎಲ್ಲಿ ಅಂದರಲ್ಲಿ ಪೈಪ್ ಲೈನ್ ಹೊಡೆದು ನೀರು ಪೋಲ್ ಆಗುತ್ತಿವೆ. ಗುತ್ತಿಗೆದಾರರು ಕಳಪೆ ಸಾಮಗ್ರಿಗಳನ್ನು ಬಳಸಿದ್ರಿಂದ ನೀರು ಪೋಲಾಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ತಾಲೂಕು ಅಧ್ಯಕ್ಷ ಗದ್ಯಪ್ಪ ಚಿತ್ತಾಪುರ.
ಅನಿಲ್ ಕುಮಾರ್. ಅಮರೇಶ ಆನೇಹೂಸೂರು ಮತ್ತರರು ಇದರು.

ಇತ್ತೀಚಿನ ಸುದ್ದಿ

ಜಾಹೀರಾತು