3:27 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

07/05/2025, 16:24

ಬೆಂಗಳೂರು(reporterkarnataka.com): ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯರ ಮೇಲೆ ದಾಳಿ ಮಾಡಿದ್ದ ಪಾಕ್ ಪೋಷಿತ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿ ಪ್ರತ್ಯುತ್ತರ ನೀಡಿದ್ದು, ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ದಾಳಿ ನಡೆದಿದ್ದು, ಸೇನೆಯ ಕಾರ್ಯಕ್ಕೆ ದೇಶವೇ ಹೆಮ್ಮೆ ಪಡುವಂತೆ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಭಯೋತ್ಪಾದಕರ ನೆಲೆಗಟ್ಟು ಮತ್ತು ತರಬೇತಿ ನೀಡುವ ಫ್ಯಾಕ್ಟರಿ ಆಗಿ ಪರಿವರ್ತನೆ ಆಗಿದೆ. ಇದು ಕೇವಲ ಭಾರತ ಅಷ್ಟೇ ಅಲ್ಲ ಇಡೀ ವಿಶ್ವದಲ್ಲೇ ಭಯೋತ್ಪಾದನೆ ಕಿತ್ತೊಗೆಯುವ ಕೆಲಸ ಭಾರತೀಯ ಸೇನೆ ಮಾಡಿದೆ. ಇದು ಇನ್ನೂ ಪ್ರಾರಂಭ ಪಾಕಿಸ್ತಾನದಲ್ಲಿರುವ ಕೊನೆಯ ಭಯೋತ್ಪಾದಕರಿರುವವರೆಗೂ ಈ ಕಾರ್ಯಾಚರಣೆ ನಡೆಯುತ್ತದೆ ಎಂದು ಹೇಳಿದ್ದಾರೆ.
ಇಂತಹ ಸಂದರ್ಭದಲ್ಲಿ ಎಲ್ಲ ಭಾರತೀಯರು ಒಂದಾಗಿ ನಮ್ಮ ಪ್ರಧಾನಿ ನರೇಂದ್ರ ಮೊದಿ ಹಾಗೂ ನಮ್ಮ ದೇಶದ ಪ್ರಬಲ ಸೇನಾ ಪಡೆ ಹಿಂದೆ ಒಗ್ಗಟ್ಟಾಗಿ ನಿಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ದೇಶಗಳು ಭಾರತದ ಈ ಕಾರ್ಯಾಚರಣೆಗೆ ಬೆಂಬಲ ಸೂಚಿಸಬೇಕು.
ಪಹಲ್ಗಾಮ್ ದಾಳಿಯಲ್ಲಿ ಮರಣ ಹೊಂದಿದ ಹಲವಾರು ಮುಗ್ದ ಭಾರತಿಯರ ಕುಟುಂಬಗಳ ಭಾವನೆ ಹಾಗೂ ತಮ್ಮ ಸಿಂಧೂರ ಕಳೆದು ಕೊಂಡಿರುವ ಹೆಣ್ಣು ಮಕ್ಕಳ ಪ್ರತೀಕಾರವಾಗಿ ಇದು ಆಪರೇಷನ್ ಸಿಂಧೂರ ಎಂದು ನಮ್ಮ ಪ್ರಧಾನಮಂತ್ರಿ ಹೆಸರಿಸಿ, ಹೆಸರಿಗೆ ತಕ್ಕ ಹಾಗೆ ದಾಳಿ ಮಾಡಿದ್ದಾರೆ. ಅವರ ಜೊತೆಗೆ ನಿಂತ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್ ಮತ್ತು ಭಾರತೀಯ ಸೇನೆಗೆ ಹೃದಯ ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು