2:58 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯಲ್ಲಿ ಲಲಿತಾ ಸಹಸ್ರನಾಮ ಪಠಣ; ಕುಂಕುಮಾರ್ಚನೆ

07/05/2025, 20:49

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆ ತನ್ನ ನವೀಕೃತ, ನೂತನ ಹಾಗೂ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಏಪ್ರಿಲ್ 20ರಿಂದ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವಾರು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದು, ಅದರ ಭಾಗವಾಗಿ ಮೇ 6ರಂದು ಪುತ್ತೂರು ಮುಳಿಯದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಕುಂಕುಮಾರ್ಚನೆಯ ಪುಣ್ಯ ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿಯಿಂದ ನೆರವೇರಿಸಲಾಯಿತು.
ಊರಿನ ಗೌರವಾನ್ವಿತ ವೇದಮೂರ್ತಿ ಉದಯ ಭಟ್ ಅವರ ವೇದಪಾರಂಗತ ಸಾನ್ನಿಧ್ಯ ಈ ದೈವಿಕ ಆಚರಣೆಗೆ ಆಧ್ಯಾತ್ಮಿಕ ಉತ್ತೇಜನ ನೀಡಿದಂತಾಯಿತು. ಸತತವಾಗಿ 3 ವರ್ಷಗಳಿಂದ ಮಾತಾ ಭಗಿನಿಯರಿಗೆ ಲಲಿತಾ ಸಹಸ್ರನಾಮ ಹೇಳಿಕೊಟ್ಟ ನೆಲೆಯಲ್ಲಿ ವೇದಮೂರ್ತಿ ಉದಯ್ ಭಟ್ ಅವರನ್ನು ಗೌರವಿಸಲಾಯಿತು. ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ಅವರು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ನುಡಿಗಳನ್ನು ನುಡಿದರು. ಈ ಪಾವನ ಕಾರ್ಯಕ್ರಮದ ವಿಶೇಷತೆ ಎಂಬಂತೆ, ಕುಂಕುಮಾರ್ಚನೆಯಲ್ಲಿ ಪಾಲ್ಗೊಂಡ ಎಲ್ಲಾ ಮಹಿಳೆಯರಿಗೆ ‘ಕುಂಕುಮ ಮಹತಿ ’ ಎಂಬ ಶ್ರೇಷ್ಠ ಕಿರುಹೊತ್ತಗೆಯನ್ನು ಕಿರು ಉಡುಗೊರೆಯಾಗಿ ನೀಡಿದರು. ನವ ವಿನ್ಯಾಸದ ಸ್ವರ್ಣ ಲೇಪಿತ ಬೆಳ್ಳಿಯ ಕುಂಕುಮ ಕರಡಿಗೆಯನ್ನು ಹಿರಿಯ ಮಹಿಳೆಯರಿಂದ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಉಸ್ತುವಾರಿ ಸಂಸ್ಥೆಯ ನಿರ್ದೇಶಕಿ ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಅತ್ಯಂತ ಶ್ರದ್ಧಾಭಕ್ತಿಯಿಂದ ನಿರ್ವಹಿಸಿದರು.
ಸಂಸ್ಥೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ತಮ್ಮ ಸಹಕಾರವನ್ನು ನೀಡಿದರು.

ಲಲಿತಾ ಸಹಸ್ರನಾಮ ಪಠಣ ಮತ್ತು ಕುಂಕುಮಾರ್ಚನೆಯಂತಹ ಧಾರ್ಮಿಕ ಆಚರಣೆಗಳು ಮನಸ್ಸಿಗೆ ಶಾಂತಿ ನೀಡುವಂತಹ ಅತ್ಯುನ್ನತ ಪೂಜಾ ವಿಧಾನಗಳು. ಪ್ರತಿಯೊಂದು ನಾಮದಲ್ಲಿ ದೇವಿಯ ಆಧ್ಯಾತ್ಮಿಕ ಶಕ್ತಿ ಅಡಗಿದ್ದು, ಪ್ರತಿಯೊಂದು ಚಿಟಿಕೆ ಕುಂಕುಮದ ಅರ್ಪಣೆಯಲ್ಲಿಯೂ ಭಕ್ತಿಯ ಪರಾಕಾಷ್ಠೆ ಕಾಣಬಹುದು.
ಈ ಸಂದರ್ಭದಲ್ಲಿ ಭಾಗವಹಿಸಿದ ಶ್ರೀ ದೇವಿಯ ಆರಾಧಕರೆಲ್ಲರೂ ಆಧ್ಯಾತ್ಮಿಕ ಶಕ್ತಿ ಮತ್ತು ಸಂತೋಷದಿಂದ ಕೂಡಿದ ಅನುಭವವನ್ನು ಹೊತ್ತು ಮರಳಿದರು.ಮುಂದಿನ ದಿನಗಳಲ್ಲಿಯೂ ಇಂತಹ ಭಕ್ತಿಪೂರ್ಣ ಹಾಗೂ ಸಾಮಾಜಿಕ ಉದ್ದೇಶದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸಂಸ್ಥೆಯ ಆಶಯವಾಗಿದೆ.
ಶ್ರೀಮಾತೆಯ ದಿವ್ಯ ಅನುಗ್ರಹ ಎಲ್ಲರ ಮೇಲೂ ಸದಾ ಇರಲಿ. ಜಗನ್ಮಾತೆ ಕುಂಕುಮಶೋಭಿತೆ ಶ್ರೀಲಲಿತೆ ಎಲ್ಲರ ಕೈಹಿಡಿದು ನಡೆಸಲಿ. ಎಲ್ಲರಿಗೂ ಸನ್ಮಂಗಳವನ್ನುಂಟುಮಾಡಲಿ.

ಇತ್ತೀಚಿನ ಸುದ್ದಿ

ಜಾಹೀರಾತು