2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ ಕಂಕಣ ಭಾಗ್ಯ

07/05/2025, 21:02

ದೊಡ್ಡಬಳ್ಳಾಪುರ(reporterkarnataka.com): ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು, ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಈ ಶುಭ ಲಗ್ನ ದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.
ಅಧಿಕಾರಿಗಳು ಮತ್ತು ಪ್ರಾಧಿಕಾರದ ಸದಸ್ಯರು ಉತ್ತಮ ವಾಗಿ ಕಾರ್ಯಕ್ರಮ ಆಯೋಜಿಸಿದ್ದು ನಿಮಗೆ ವಿಶೇಷವಾದ ಧನ್ಯವಾದಗಳನ್ನು ತಿಳಿಸಬೇಕು.
ಮದುವೆಗೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಮಾಡುವ ಮದುವೆಗಳಿಗಿಂತ ದೇವರ ಸನ್ನಿದಾನದಲ್ಲಿ ಮಾಡಿರುವ ಈ ಮದುವೆ ಶ್ರೇಷ್ಠವಾಗಿದೆ. ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ದೇವರು ಕರುಣಿಸಲಿ ಎಂದರು.


ನವ ದಂಪತಿಗಳಾದ ತಾವು ಪ್ರೀತಿ ವಾತ್ಸಲ್ಯದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಂಡು ಉತ್ತಮ ಜೀವನಸಾಗಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಬಸವರಾಜು, ಸಿಇಒ ಡಾ.ಅನುರಾಧ, ಮಾಜಿ ಶಾಸಕ ವೆಂಕಟರಮಣಯ್ಯ, ಉಪವಿಭಾಗಾಧಿಕಾರಿ ದುರ್ಗಶ್ರೀ, ತಹಶಿಲ್ದಾರ್ ವಿಭಾ ರಾಥೊಡ್, ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಮಹೇಶ್, ರವಿ, ಹೇಮಲತಾ ,ಲಕ್ಷ್ಮಾ ನಾಯಕ್ , ಬಯ್ಯಪ್ಪಾ ಸದಸ್ಯರಾದ ಮಂಜುನಾಥ್, ರವಿಸಿದ್ದಪ್ಪ, ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು