12:44 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್​ ಘೋಷಣೆ

08/05/2025, 15:40

ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ​ ಪಾಕ್​ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್​ ಘೋಷಿಸಲಾಗಿದೆ.
ಪಂಜಾಬಿನ‌ ಫಿರೋಜ್​ಪುರ್​, ಪಠಾಣ್​ಕೋಟ್​, ಫಜಿಲ್ಕಾ, ಅಮೃತ್​ಸರ್​, ಗುರುದಾಸ್​ಪುರ್​​ ಮತ್ತು ತರಣ್ ತರಣ್​ ಜಿಲ್ಲೆಗಳಲ್ಲಿ ಶಾಲೆಗಳು ಬಂದ್​ ಆಗಲಿದೆ. ಬುಧವಾರ ನಸುಕಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರರ
ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶ ಕೂಡ ಸೇರಿತ್ತು. ಭಾರತೀಯ ವಾಯುಸೇನೆ ಸುಮಾರು 70 ಕಿಮೀ. ಒಳ ನುಗ್ಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು‌
ತರಣ್ ತರಣ್ ಜಿಲ್ಲೆಯ ಉಪ ಆಯುಕ್ತರು ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8ರಿಂದ 11ರವರೆಗೆ ಮುಚ್ಚಲ್ಪಡುತ್ತವೆ ಎಂದು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಫಜಿಲ್ಕಾ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳು ಬಂದ್​ ಆಗಿರಲಿವೆ. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರದಿಂದಲೇ ಚಂಢೀಗಢ, ಅಮೃತ್​ಸರ ಸೇರಿದಂತೆ ಸುಮಾರು 18 ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು