1:01 PM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್​ ಘೋಷಣೆ

08/05/2025, 15:40

ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ​ ಪಾಕ್​ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್​ ಘೋಷಿಸಲಾಗಿದೆ.
ಪಂಜಾಬಿನ‌ ಫಿರೋಜ್​ಪುರ್​, ಪಠಾಣ್​ಕೋಟ್​, ಫಜಿಲ್ಕಾ, ಅಮೃತ್​ಸರ್​, ಗುರುದಾಸ್​ಪುರ್​​ ಮತ್ತು ತರಣ್ ತರಣ್​ ಜಿಲ್ಲೆಗಳಲ್ಲಿ ಶಾಲೆಗಳು ಬಂದ್​ ಆಗಲಿದೆ. ಬುಧವಾರ ನಸುಕಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರರ
ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶ ಕೂಡ ಸೇರಿತ್ತು. ಭಾರತೀಯ ವಾಯುಸೇನೆ ಸುಮಾರು 70 ಕಿಮೀ. ಒಳ ನುಗ್ಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು‌
ತರಣ್ ತರಣ್ ಜಿಲ್ಲೆಯ ಉಪ ಆಯುಕ್ತರು ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8ರಿಂದ 11ರವರೆಗೆ ಮುಚ್ಚಲ್ಪಡುತ್ತವೆ ಎಂದು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಫಜಿಲ್ಕಾ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳು ಬಂದ್​ ಆಗಿರಲಿವೆ. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರದಿಂದಲೇ ಚಂಢೀಗಢ, ಅಮೃತ್​ಸರ ಸೇರಿದಂತೆ ಸುಮಾರು 18 ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು