6:57 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್​ ಘೋಷಣೆ

08/05/2025, 15:40

ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ​ ಪಾಕ್​ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್​ ಘೋಷಿಸಲಾಗಿದೆ.
ಪಂಜಾಬಿನ‌ ಫಿರೋಜ್​ಪುರ್​, ಪಠಾಣ್​ಕೋಟ್​, ಫಜಿಲ್ಕಾ, ಅಮೃತ್​ಸರ್​, ಗುರುದಾಸ್​ಪುರ್​​ ಮತ್ತು ತರಣ್ ತರಣ್​ ಜಿಲ್ಲೆಗಳಲ್ಲಿ ಶಾಲೆಗಳು ಬಂದ್​ ಆಗಲಿದೆ. ಬುಧವಾರ ನಸುಕಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರರ
ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶ ಕೂಡ ಸೇರಿತ್ತು. ಭಾರತೀಯ ವಾಯುಸೇನೆ ಸುಮಾರು 70 ಕಿಮೀ. ಒಳ ನುಗ್ಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು‌
ತರಣ್ ತರಣ್ ಜಿಲ್ಲೆಯ ಉಪ ಆಯುಕ್ತರು ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8ರಿಂದ 11ರವರೆಗೆ ಮುಚ್ಚಲ್ಪಡುತ್ತವೆ ಎಂದು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಫಜಿಲ್ಕಾ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳು ಬಂದ್​ ಆಗಿರಲಿವೆ. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರದಿಂದಲೇ ಚಂಢೀಗಢ, ಅಮೃತ್​ಸರ ಸೇರಿದಂತೆ ಸುಮಾರು 18 ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು