1:30 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಭಾರತ- ಪಾಕ್ ನಡುವೆ ಉದ್ವಿಗ್ನ ಸ್ಥಿತಿ: ಗಡಿ ಜಿಲ್ಲೆಗಳ ಶಾಲಾ- ಕಾಲೇಜ್ ಬಂದ್; ಮುಚ್ಚಿದ ಏರ್ ಪೋರ್ಟ್; ಹೈ ಆಲರ್ಟ್​ ಘೋಷಣೆ

08/05/2025, 15:40

ಚಂಡೀಗಢ(reporterkarnataka.com): ಭಾರತ ಮತ್ತು ಪಾಕಿಸ್ತಾನದ ನಡುವೆ ದಿನಕಳೆದಂತೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ​ ಪಾಕ್​ ಗಡಿ ಹೊಂದಿಕೊಂಡಿರುವ ಪಂಜಾಬ್ ನ 6 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳನ್ನು ಬಂದ್​ ಮಾಡಿ ಆದೇಶ ಹೊರಡಿಸಲಾಗಿದೆ. ಈ ಮಧ್ಯೆ ದೇಶದ ಗಡಿ ರಾಜ್ಯಗಳಲ್ಲಿ ಹೈ ಆಲರ್ಟ್​ ಘೋಷಿಸಲಾಗಿದೆ.
ಪಂಜಾಬಿನ‌ ಫಿರೋಜ್​ಪುರ್​, ಪಠಾಣ್​ಕೋಟ್​, ಫಜಿಲ್ಕಾ, ಅಮೃತ್​ಸರ್​, ಗುರುದಾಸ್​ಪುರ್​​ ಮತ್ತು ತರಣ್ ತರಣ್​ ಜಿಲ್ಲೆಗಳಲ್ಲಿ ಶಾಲೆಗಳು ಬಂದ್​ ಆಗಲಿದೆ. ಬುಧವಾರ ನಸುಕಿನಲ್ಲಿ ಭಾರತೀಯ ಸೇನೆ ಪಾಕಿಸ್ತಾನ ಮತ್ತು ಪಾಕ್​ ಆಕ್ರಮಿತ ಪ್ರದೇಶದಲ್ಲಿ ಉಗ್ರರ
ಅಡಗುತಾಣದ ಮೇಲೆ ದಾಳಿ ನಡೆಸಿತ್ತು. ಜೈಶ್​ ಎ ಮೊಹಮ್ಮದ್​​ ಭದ್ರಕೋಟೆಯಾದ ಬಹವಾಲ್ಪುರ್ ಹಾಗೂ ಲಷ್ಕರ್​ ಎ ತೋಯ್ಬಾದ ಮುರಿಡ್ಕೆ ನೆಲೆಗಳು ಸೇರಿದಂತೆ 9 ಉಗ್ರರ ಅಡುಗುತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಪಾಕ್ ಹಾಗೂ ಪಾಕ್ ಆಕ್ರಮಿತ ಪ್ರದೇಶ ಕೂಡ ಸೇರಿತ್ತು. ಭಾರತೀಯ ವಾಯುಸೇನೆ ಸುಮಾರು 70 ಕಿಮೀ. ಒಳ ನುಗ್ಗಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿತ್ತು‌
ತರಣ್ ತರಣ್ ಜಿಲ್ಲೆಯ ಉಪ ಆಯುಕ್ತರು ಜಿಲ್ಲೆಯ ಎಲ್ಲಾ ಶಾಲೆಗಳು ಮೇ 8ರಿಂದ 11ರವರೆಗೆ ಮುಚ್ಚಲ್ಪಡುತ್ತವೆ ಎಂದು ಆದೇಶ ಹೊರಡಿಸಿದ್ದಾರೆ. ಫಿರೋಜ್‌ಪುರದಲ್ಲಿ, ಮುಂದಿನ 72 ಗಂಟೆಗಳ ಕಾಲ ಶಾಲೆಗಳನ್ನು ಮುಚ್ಚಲು ಅಧಿಕಾರಿಗಳು ಆದೇಶಿಸಿದ್ದಾರೆ. ಫಜಿಲ್ಕಾ ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲೆಗಳು ಬಂದ್​ ಆಗಿರಲಿವೆ. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಬುಧವಾರದಿಂದಲೇ ಚಂಢೀಗಢ, ಅಮೃತ್​ಸರ ಸೇರಿದಂತೆ ಸುಮಾರು 18 ವಿಮಾನ ನಿಲ್ದಾಣಗಳನ್ನು ಬಂದ್​ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು