6:52 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾನೂನು ಸುವ್ಯವಸ್ಥೆ: ಅಧಿಕಾರಿಗಳ ಜತೆ ಸ್ಪೀಕರ್, ಉಸ್ತುವಾರಿ ಸಚಿವರ ಸಭೆ; ದುಷ್ಕರ್ಮಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

08/05/2025, 19:32

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ನಂತರ ಸಹಜ ಸ್ಥಿತಿ ಮರುಕಳಿಸಿದ್ದು, ಪ್ರಸಕ್ತ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ಗುರುವಾರ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಜನರ ಸುರಕ್ಷತೆ ಸರಕಾರದ ಗರಿಷ್ಠ ಆದ್ಯತೆಯಾಗಿದೆ. ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯುವ ಅವಶ್ಯಕತೆ ಇಲ್ಲ ಎಂದು ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಸೂಚಿಸಿದರು. ಜನಸಾಮಾನ್ಯರಲ್ಲಿ ನೆಮ್ಮದಿಯ ವಾತಾವರಣ ಮೂಡಿಸುವುದೇ ಸರಕಾರದ ಆದ್ಯತೆ. ಹೆಚ್ಚುವರಿ ಭದ್ರತೆಯನ್ನು ಇನ್ನೂ ಸ್ವಲ್ಪ ಕಾಲ ಮುಂದುವರಿಸಬೇಕು ಎಂದು ಸಚಿವರು ತಿಳಿಸಿದರು.
ಪ್ರಸ್ತುತ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಪರಿಸ್ಥಿತಿ ಈಗ ಎಂದಿನಂತೆ ಸಹಜ ಸ್ಥಿತಿಗೆ ಮರಳಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಅಧಿಕಾರಿಗಳು ಸಂಜೆ ಬಳಿಕ ನಿರಂತರ ರೌಂಡ್ಸ್ ನಲ್ಲಿದ್ದಾರೆ. ಹೊರ ಜಿಲ್ಲೆಯ ಪೊಲೀಸರು ಹಾಗೂ ಕೆ.ಎಸ್.ಆರ್.ಪಿ. ತುಕಡಿಗಳನ್ನು ಹೆಚ್ಚುವರಿ ಭದ್ರತೆಗೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಡಿಸಿಪಿ ಸಿದ್ಧಾರ್ಥ ಗೋಯಲ್ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ನಿಗಾ ಇಡಲಾಗಿದೆ. ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಅಪರಾಧ ಹಿನ್ನಲೆಯುಳ್ಳ ವ್ಯಕ್ತಿಗಳ ಮೇಲೂ ನಿಗಾ ಇಡಲಾಗಿದೆ ಎಂದರು.

ಪೆÇಲೀಸ್ ವರಿಷ್ಠಾಧಿಕಾರಿ ಯತೀಶ್ ಅವರು ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಗಾ ಇಡಲಾಗಿದೆ ಎಂದು ತಿಳಿಸಿದರು.
ವೀಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಈ ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಆನಂದ್ ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು