6:27 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕದನ ವಿರಾಮ ಘೋಷಿಸಿದ ಕೆಲವೇ ತಾಸಿನಲ್ಲಿ ಶ್ರೀನಗರದಲ್ಲಿ ಸ್ಫೋಟ: ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ; ಪಂಜಾಬ್ ಮತ್ತೆ ಬ್ಲ್ಯಾಕ್‌ಔಟ್‌

10/05/2025, 23:12

ನವದೆಹಲಿ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ತಾಸುಗಳಲ್ಲಿ ಶ್ರೀನಗರದಲ್ಲಿ ಸ್ಫೋಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ನಗರವನ್ನು ಕತ್ತಲಿನಲ್ಲಿ ಇಡಲಾಗಿದೆ.
ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ ಮತ್ತು ಶ್ರೀನಗರದಲ್ಲಿ ಅನೇಕ ಸ್ಫೋಟಗಳು ಸಂಭವಿಸಿವೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಗಂಟೆಗಳ ನಂತರ ಶನಿವಾರ ರಾತ್ರಿ ಶ್ರೀನಗರದಲ್ಲಿ ಬಹು ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬಂದವು. “ಕದನ ವಿರಾಮಕ್ಕೆ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳು ಕೇಳಿ ಬಂದವು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು ಕದನ ವಿರಾಮವಲ್ಲ” ಎಂದು ಸೇರಿಸಿದ್ದಾರೆ. ಮೂಲಗಳ ಪ್ರಕಾರ ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ, ಶ್ರೀನಗರದಲ್ಲಿ ಹಲವು ಸ್ಫೋಟಗಳು ಸಂಭವಿಸಿವೆ.
*ಮತ್ತೆ ಬ್ಲ್ಯಾಕ್‌ಔಟ್‌ ಜಾರಿ:* ಪಂಜಾಬ್‌ನ ಅಮೃತಸರ, ಫಿರೋಜ್‌ಪುರ, ಬರ್ನಾಲಾ, ಪಠಾಣ್‌ಕೋಟ್, ಬಟಿಂಡಾ ಮತ್ತು ಸಂಗ್ರೂರ್ ಸೇರಿದಂತೆ ಹಲವು ನಗರಗಳಲ್ಲಿ ಬ್ಲ್ಯಾಕ್‌ಔಟ್ ಜಾರಿಗೊಳಿಸಲಾಗಿದೆ. ಕೆಲವು ಜಿಲ್ಲಾಡಳಿತಗಳು ಇದನ್ನು “ಮುನ್ನೆಚ್ಚರಿಕೆ ಕ್ರಮ” ಎಂದು ಹೇಳಿವೆ. ಗುಜರಾತ್‌ನ ಕಚ್‌ನಲ್ಲಿ, ಗೃಹ ಖಾತೆಯ ರಾಜ್ಯ ಸಚಿವ ಹರ್ಷ ಸಾಂಘವಿ ಅವರು “ಹಲವಾರು ಡ್ರೋನ್‌ಗಳನ್ನು ಗುರುತಿಸಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು