5:06 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕದನ ವಿರಾಮ ಘೋಷಿಸಿದ ಕೆಲವೇ ತಾಸಿನಲ್ಲಿ ಶ್ರೀನಗರದಲ್ಲಿ ಸ್ಫೋಟ: ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ; ಪಂಜಾಬ್ ಮತ್ತೆ ಬ್ಲ್ಯಾಕ್‌ಔಟ್‌

10/05/2025, 23:12

ನವದೆಹಲಿ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ತಾಸುಗಳಲ್ಲಿ ಶ್ರೀನಗರದಲ್ಲಿ ಸ್ಫೋಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ನಗರವನ್ನು ಕತ್ತಲಿನಲ್ಲಿ ಇಡಲಾಗಿದೆ.
ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ ಮತ್ತು ಶ್ರೀನಗರದಲ್ಲಿ ಅನೇಕ ಸ್ಫೋಟಗಳು ಸಂಭವಿಸಿವೆ.
ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ಘೋಷಿಸಿದ ಗಂಟೆಗಳ ನಂತರ ಶನಿವಾರ ರಾತ್ರಿ ಶ್ರೀನಗರದಲ್ಲಿ ಬಹು ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬಂದವು. “ಕದನ ವಿರಾಮಕ್ಕೆ ಏನಾಯಿತು? ಶ್ರೀನಗರದಾದ್ಯಂತ ಸ್ಫೋಟಗಳು ಕೇಳಿ ಬಂದವು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಇದು ಕದನ ವಿರಾಮವಲ್ಲ” ಎಂದು ಸೇರಿಸಿದ್ದಾರೆ. ಮೂಲಗಳ ಪ್ರಕಾರ ಉಧಮ್‌ಪುರದಲ್ಲಿ ಭಾರೀ ಶೆಲ್ ದಾಳಿ, ಶ್ರೀನಗರದಲ್ಲಿ ಹಲವು ಸ್ಫೋಟಗಳು ಸಂಭವಿಸಿವೆ.
*ಮತ್ತೆ ಬ್ಲ್ಯಾಕ್‌ಔಟ್‌ ಜಾರಿ:* ಪಂಜಾಬ್‌ನ ಅಮೃತಸರ, ಫಿರೋಜ್‌ಪುರ, ಬರ್ನಾಲಾ, ಪಠಾಣ್‌ಕೋಟ್, ಬಟಿಂಡಾ ಮತ್ತು ಸಂಗ್ರೂರ್ ಸೇರಿದಂತೆ ಹಲವು ನಗರಗಳಲ್ಲಿ ಬ್ಲ್ಯಾಕ್‌ಔಟ್ ಜಾರಿಗೊಳಿಸಲಾಗಿದೆ. ಕೆಲವು ಜಿಲ್ಲಾಡಳಿತಗಳು ಇದನ್ನು “ಮುನ್ನೆಚ್ಚರಿಕೆ ಕ್ರಮ” ಎಂದು ಹೇಳಿವೆ. ಗುಜರಾತ್‌ನ ಕಚ್‌ನಲ್ಲಿ, ಗೃಹ ಖಾತೆಯ ರಾಜ್ಯ ಸಚಿವ ಹರ್ಷ ಸಾಂಘವಿ ಅವರು “ಹಲವಾರು ಡ್ರೋನ್‌ಗಳನ್ನು ಗುರುತಿಸಲಾಗಿದೆ” ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು