1:30 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

Puttur Accident | ಕೆಎಸ್ಸಾರ್ಟಿಸಿ ಬಸ್ – ಬೈಕ್ ಭೀಕರ ಅಪಘಾತ; ಅಪ್ಪ -ಮಗ ದಾರುಣ ಸಾವು

11/05/2025, 19:02

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ
ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಅರುಣ ಕುಲಾಲ್‌(45 ) ಹಾಗೂ ಅವರ ಪುತ್ರ ಧ್ಯಾನ್ (15) ಎಂದು ಗುರುತಿಸಲಾಗಿದೆ.
ಕುವೆತ್ತಿಲ ರಸ್ತೆ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮೃತ ಅರುಣ ಕುಲಾಲ್ ಅವರು ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಾ ಬ್ಯಾಂಕ್ ನಿರ್ದೇಶಕರೂ ಆಗಿದ್ದಾರೆ.
ಅರುಣ ಕುಲಾಲ್‌ ಕುಟುಂಬ ಭಾನುವಾರ
ಸುಳ್ಯದಲ್ಲಿ ನಡೆಯಲಿದ್ದ ಮದುವೆಗಾಗಿ ಹೊರಟಿದ್ದರು. ತಾಯಿ ಬಸ್ಸಿನಲ್ಲಿ ಪ್ರಯಾಣಿಸಿದ್ದರು. ತಂದೆ ಮಗ ಬೈಕ್ ನಲ್ಲಿ ಹೋಗುತ್ತಿದ್ದರು.
ಬಸ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಜೀವಕಳೆದುಕೊಳ್ಳುವಂತಾಯಿತು. ಚಾಲಕನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು