5:38 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Puttur Accident | ಕೆಎಸ್ಸಾರ್ಟಿಸಿ ಬಸ್ – ಬೈಕ್ ಭೀಕರ ಅಪಘಾತ; ಅಪ್ಪ -ಮಗ ದಾರುಣ ಸಾವು

11/05/2025, 19:02

ಜಯಾನಂದ ಪೆರಾಜೆ ಬಂಟ್ವಾಳ
info.reporterkarnataka@gmail.com

ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ
ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಅರುಣ ಕುಲಾಲ್‌(45 ) ಹಾಗೂ ಅವರ ಪುತ್ರ ಧ್ಯಾನ್ (15) ಎಂದು ಗುರುತಿಸಲಾಗಿದೆ.
ಕುವೆತ್ತಿಲ ರಸ್ತೆ ತಿರುವಿನಲ್ಲಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮೃತ ಅರುಣ ಕುಲಾಲ್ ಅವರು ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿಯಾಗಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಾ ಬ್ಯಾಂಕ್ ನಿರ್ದೇಶಕರೂ ಆಗಿದ್ದಾರೆ.
ಅರುಣ ಕುಲಾಲ್‌ ಕುಟುಂಬ ಭಾನುವಾರ
ಸುಳ್ಯದಲ್ಲಿ ನಡೆಯಲಿದ್ದ ಮದುವೆಗಾಗಿ ಹೊರಟಿದ್ದರು. ತಾಯಿ ಬಸ್ಸಿನಲ್ಲಿ ಪ್ರಯಾಣಿಸಿದ್ದರು. ತಂದೆ ಮಗ ಬೈಕ್ ನಲ್ಲಿ ಹೋಗುತ್ತಿದ್ದರು.
ಬಸ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಜೀವಕಳೆದುಕೊಳ್ಳುವಂತಾಯಿತು. ಚಾಲಕನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು