1:43 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ; ರಾಕೇಶ್ ಪೂಜಾರಿ ಇನ್ನೂ ನೆನಪು ಮಾತ್ರ !

12/05/2025, 07:51

ಉಡುಪಿ(reporterkarnataka.com)
: ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ 3ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ ಸೋಮವಾರ ನಿಧನರಾಗಿದ್ದಾರೆ.
ತನ್ನ ಹಾಸ್ಯದ ಮೂಲಕ ಕರುನಾಡ ಮನಗೆದ್ದ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲೂ ಛಾಪು ಮೂಡಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ(ಮೇ 12)ಮುಂಜಾವಿನ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಕಳದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ಎನ್ನಲಾಗಿದೆ.

ಕಿರುತೆರೆಯಲ್ಲಿ ರಾಕೇಶ್ ಜನಪ್ರಿಯತೆಯನ್ನು ಗಳಿಸಿದ್ದರು. ‘ಹಿಟ್ಲ‌ರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ಸುದೀಪ್ ಅವರ ‘ಪೈಲ್ವಾನ್’ ಚಿತ್ರ ಸೇರಿದಂತೆ ಅನೇಕ ಕನ್ನಡ ಹಾಗೂ ತುಳು ಸಿನಿಮಾಗಳಲ್ಲಿಯೂ ರಾಕೇಶ್ ನಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು