9:07 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಇಹ ಲೋಕ ತ್ಯಜಿಸಿದ ಕಾಮಿಡಿ ಕಿಲಾಡಿ ; ರಾಕೇಶ್ ಪೂಜಾರಿ ಇನ್ನೂ ನೆನಪು ಮಾತ್ರ !

12/05/2025, 07:51

ಉಡುಪಿ(reporterkarnataka.com)
: ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ಸೀಸನ್ 3ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ ಸೋಮವಾರ ನಿಧನರಾಗಿದ್ದಾರೆ.
ತನ್ನ ಹಾಸ್ಯದ ಮೂಲಕ ಕರುನಾಡ ಮನಗೆದ್ದ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲೂ ಛಾಪು ಮೂಡಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ(ಮೇ 12)ಮುಂಜಾವಿನ ವೇಳೆಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಾರ್ಕಳದಲ್ಲಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹಠಾತ್ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೆ ಅವರು ನಿಧನರಾಗಿದ್ದಾರೆ ಎಂದು ಎನ್ನಲಾಗಿದೆ.

ಕಿರುತೆರೆಯಲ್ಲಿ ರಾಕೇಶ್ ಜನಪ್ರಿಯತೆಯನ್ನು ಗಳಿಸಿದ್ದರು. ‘ಹಿಟ್ಲ‌ರ್ ಕಲ್ಯಾಣ’ ಧಾರಾವಾಹಿಯಲ್ಲಿ ನಟಿಸಿದ್ದರು. ಸುದೀಪ್ ಅವರ ‘ಪೈಲ್ವಾನ್’ ಚಿತ್ರ ಸೇರಿದಂತೆ ಅನೇಕ ಕನ್ನಡ ಹಾಗೂ ತುಳು ಸಿನಿಮಾಗಳಲ್ಲಿಯೂ ರಾಕೇಶ್ ನಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು