2:21 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು