9:07 PM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಬೊಂಬೆಯಾಟ ದೇವಿ ಮಹಾತ್ಮೆ

12/05/2025, 10:46

ಪುತ್ತೂರು(reporterkarnataka.com): ಮುಳಿಯದ ಹೊಸ ವಿನೂತನ ಶೋರೂಮ್ ಉದ್ಘಾಟನಾ ಸಮಾರಂಭದ ಅಂಗವಾಗಿ ಕಾಸರಗೋಡಿನ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದಿಂದ ಮೇ 13ರಂದು ಸಂಜೆ .6.30 ಕ್ಕೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬೊಂಬೆಯಾಟ ನಡೆಯಲಿದೆ.

ಗೊಂಬೆಯಾಟ ಅತೀ ಪುರಾತನ ಜಾನಪದ ಕಲೆಯಾಗಿದೆ. ನೂರು ವರ್ಷಗಳ ಹಿಂದೆ ನಮ್ಮ ಕರಾವಳಿಯಲ್ಲಿ ಮೂವತ್ತಕ್ಕಿಂತಲೂ ಹೆಚ್ಚು ಬೊಂಬೆಯಾಟ ತಂಡಗಳಿದ್ದುವು. ಆದರೆ ಆಧುನಿಕ ಮಾಧ್ಯಮಗಳ ಹಾವಳಿಯಿಂದ ಈ ಜಾನಪದ ಕಲೆಯೂ ಅವನತಿಯ ಅಂಚಿನತ್ತ ಧಾವಿಸುತ್ತಿದೆ. ಇಂದು ಕೇವಲ ಎರಡು ತಂಡಗಳು ಮಾತ್ರ ಜೀವಂತವಾಗಿದೆ.

*”ಪುತ್ತೂರು ಬಾಚನನ್ನು** ಕಾಸರಗೋಡಿನ ಬೊಂಬೆಯಾಟದ ಜನಕನೆಂದು ಗುರುತಿಸುತ್ತಾರೆ. ಅವನು ಕೆತ್ತಿದ ಬೊಂಬೆಗಳು ಇಂದೂ ಕಾಸರಗೋಡಿನ ಬೆದ್ರಡ್ಕದಲ್ಲಿದೆ. ಹೀಗೆ ಸಂಪೂರ್ಣವಾಗಿ ನಾಶವಾಗಿದ್ದ ಬೊಂಬೆಯಾಟ ಕಲೆಗೆ 1981ರಲ್ಲಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ಮೂಲಕ ಪುನಶ್ವೇತನ ನೀಡಲಾಯಿತು. ಯಕ್ಷಗಾನ ವಾಲ್ಮೀಕಿ ಕುಂಬಳೆ ಪಾರ್ತಿಸುಬ್ಬನ ವಂಶಜರಾದ ಕೆ. ಲಕ್ಷ್ಮೀನಾರಾಯಣಯ್ಯ ವಿದ್ವಾನ್ ಹಾಗೂ ಕೆ.ವೆಂಕಟಕೃಷ್ಣಯ್ಯನವರಿಂದ ಸ್ಥಾಪಿಸಲ್ಪಟ್ಟ ಈ ತಂಡವು ಪ್ರಪಂಚದ ಏಕೈಕ ತೆಂಕುತಿಟ್ಟು ಶೈಲಿಯ ಬೊಂಬೆಯಾಟ ತಂಡವಾಗಿದೆ.” ಈ ಜಾನಪದ ಬೊಂಬೆಯಾಟವನ್ನು ಪ್ರೋತ್ಸಾಹಿಸುವ ನೀತಿಯಲ್ಲಿ ನಾವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ, ಕೃಷ್ಣನಾರಾಯಣ ಮುಳಿಯ. ಈ ಬೊಂಬೆಯಾಟದ
ಪ್ರಸಂಗ *ಶ್ರೀ ದೇವಿ ಮಹಾತ್ಮೆ* ಆಗಿದ್ದು ಇದನ್ನು ಯಕ್ಷಗಾನ ಪ್ರಿಯರು *ವಿಶೇಷವಾಗಿ ಮಕ್ಕಳನ್ನು ಕರೆದುಕೊಂಡು ಬಂದು ತಾಯಂದಿರು ಕಾರ್ಯಕ್ರಮವನ್ನು ವೀಕ್ಷಿಸುವುದು ಅಗತ್ಯ ಎಂದು ಅವರು ಹೇಳಿದರು.*
ಈ ಪ್ರಸಂಗವನ್ನು ರಮೇಶ ಕೆ. ವಿ. ಅವರು ನಿರ್ದೇಶಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು