8:07 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Kolara | ಶ್ರೀನಿವಾಸಪುರ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ: ಸ್ತ್ರೀರೋಗ ತಜ್ಞರು, ಇಎನ್ ಟಿ ಡಾಕ್ಟರ್ ಇಲ್ಲ; ರೋಗಿಗಳ ಪರದಾಟ

13/05/2025, 11:57

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋKolaraಲಾರ ಜಿಲ್ಲೆಯ ಹಿಂದುಳಿದ ತಾಲ್ಲೂಕುಗಳ ಪೈಕಿ ಪ್ರಮುಖವಾದ ಶ್ರೀನಿವಾಸಪುರದಲ್ಲಿ ಆರೋಗ್ಯ ಸೇವೆಗಳ ದುಸ್ಥಿತಿ ಜನರ ಬದುಕಿಗೆ ಸಂಕಟ ತಂದೊಡ್ಡುತ್ತಿದೆ. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ದಿನದಿಂದ ದಿನಕ್ಕೆ ತೀವ್ರಗೊಂಡಿದ್ದು, ಗ್ರಾಮೀಣ ಪ್ರದೇಶದ ಸಾವಿರಾರು ಜನತೆಗೆ ತುರ್ತು ಸೇವೆಗಳ ಅಭಾವವು ಅನಿವಾರ್ಯ ಸ್ಥಿತಿಯನ್ನೇ ನಿರ್ಮಾಣ ಮಾಡಿದೆ.
ಈ ತಾಲ್ಲೂಕಿನಲ್ಲಿ ಸುಮಾರು 360 ಹಳ್ಳಿಗಳಿದ್ದು, ಇಲ್ಲಿನ ಗ್ರಾಮೀಣ ಜನತೆ ವೈದ್ಯಕೀಯ ಸೇವೆಗಾಗಿ ಬಹುಮಟ್ಟಿಗೆ ಸಾರ್ವಜನಿಕ ಆಸ್ಪತ್ರೆಯ ಮೇಲೆಯೇ ಅವಲಂಬಿತರಾಗಿದ್ದಾರೆ. ಆದರೆ, ಸ್ತ್ರೀರೋಗ ಮತ್ತು ಇ.ಎನ್.ಟಿ (ಕಿವಿ-ಮೂಗು-ಗಂಟಲು) ತಜ್ಞರ ಹುದ್ದೆಗಳು ಖಾಲಿಯಾಗಿರುವುದರಿಂದ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
*ಸ್ತ್ರೀರೋಗ ತಜ್ಞರ ಕೊರತೆ – ತಾಯಿ-ಮಗು ಅಪಾಯವಲ್ವಾ?:*
ತಾಲ್ಲೂಕಿನ ಮಹಿಳೆಯರಿಗೆ ಪ್ರಸವ ಹಾಗೂ ಗರ್ಭಪಾತದ ಸಂದರ್ಭದಲ್ಲಿ ತುರ್ತು ವೈದ್ಯಕೀಯ ನೆರವು ಅತ್ಯವಶ್ಯಕ. ಆದರೆ ಸ್ತ್ರೀರೋಗ ತಜ್ಞರ ಕೊರತೆಯಿಂದ, ಸಮಯಕ್ಕೆ ಸರಿಯಾದ ಚಿಕಿತ್ಸೆಯಾಗದೇ ಮಹಿಳೆಯರು ಹಾಗೂ ಮಕ್ಕಳ ಜೀವದರ್ಶನದ ಅಪಾಯ ಎದುರಾಗುತ್ತಿದೆ. ಹೆಚ್ಚಿನ ಪ್ರಕರಣಗಳನ್ನು ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಗೆ ಅಥವಾ ಜಾಲಪ್ಪ ವೈದ್ಯಕೀಯ ಕಾಲೇಜಿಗೆ ಕಳುಹಿಸಬೇಕಾಗುತ್ತಿದೆ. ಇದರಿಂದ ಬಡ ಕುಟುಂಬಗಳು ದಾರಿ, ಧನ ಮತ್ತು ಸಮಯದ ತೊಂದರೆ ಅನುಭವಿಸುತ್ತಿವೆ.
ಇ.ಎನ್.ಟಿ ತಜ್ಞರ ಕೊರತೆಯಿಂದ ಶ್ರವಣ ತೊಂದರೆಗೊಳಗಾದ ಮಕ್ಕಳೇನು ಮಾಡಲಿ ?
ಕಿವಿ, ಮೂಗು ಹಾಗೂ ತುಟಿ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಮಕ್ಕಳು ಮತ್ತು ವೃದ್ಧರು, ಸರಿಯಾದ ತಜ್ಞರಿಲ್ಲದ ಕಾರಣ ತಪಾಸಣೆಗಿಲ್ಲದೇ ಹಿಂತಿರುಗುತ್ತಿದ್ದಾರೆ. ಶ್ರವಣಶಕ್ತಿ ಕಳೆದುಕೊಳ್ಳುವ ಭೀತಿ ಎದುರಾಗಿದ್ದು, ಪರಿಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಕೊನೆಗೆ ರೋಗಿಗಳು 30-35 ಕಿಲೋಮೀಟರ್ ದೂರದ ಕೋಲಾರ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಹಾಜರಾಗಬೇಕಾಗುತ್ತದೆ.

*ಸರ್ಕಾರದ ನಿರ್ಲಕ್ಷ್ಯ?:*
ಆರೋಗ್ಯ ಇಲಾಖೆಯು ಬೃಹತ್ ಬಜೆಟ್ ನಿಗದಿ ಮಾಡಿದರೂ ಗ್ರಾಮೀಣ ಆಸ್ಪತ್ರೆಗಳಲ್ಲಿ ತಜ್ಞರ ನೇಮಕಾತಿಯಲ್ಲಿ ವಿಳಂಬವಾಗಿದೆ. ಕಟ್ಟಡ, ಯಂತ್ರೋಪಕರಣಗಳ ಸುಧಾರಣೆಯ ನಡುವೆಯೂ, ಮುಖ್ಯವಾಗಿ ಬೇಕಾಗಿರುವ ಮಾನವ ಸಂಪತ್ತಿನ ಕೊರತೆ ಜನರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

*ಸಾರ್ವಜನಿಕರ ಆಗ್ರಹ:*
ಈ ಹಿನ್ನಲೆಯಲ್ಲಿ ಜನತೆ ಸರ್ಕಾರದ ಗಮನ ಸೆಳೆಯುವಂತೆ ಆಗ್ರಹಿಸುತ್ತಿದ್ದಾರೆ.
*ಪ್ರಮುಖ ಬೇಡಿಕೆಗಳು:*
ಶ್ರೀನಿವಾಸಪುರದ ಸಾರ್ವಜನಿಕ ಆಸ್ಪತ್ರೆಗೆ ತುರ್ತು ಆಧಾರದಲ್ಲಿ ಸ್ತ್ರೀರೋಗ ತಜ್ಞರ ನೇಮಕ.
ಇ.ಎನ್.ಟಿ ತಜ್ಞರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು.
ತಾತ್ಕಾಲಿಕವಾಗಿ ಹೊರಗಿನ ತಜ್ಞರ ಸೇವೆಯನ್ನು ನಿರಂತರವಾಗಿ ಒದಗಿಸಬೇಕು.
ಆರೋಗ್ಯ ಶಿಬಿರಗಳಲ್ಲಿ ಹೆಚ್ಚು ತಜ್ಞರು ಪಾಲ್ಗೊಳ್ಳುವಂತೆ ಕ್ರಮವಹಿಸಬೇಕು.
ಆರೋಗ್ಯವೇ ಮಹಾಭಾಗ್ಯ ಎಂಬ ನುಡಿಗೆ ನಿಜಾರ್ಥ ದೊರೆಯಬೇಕಾದರೆ, ಸರ್ಕಾರ ಇಂಥ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು” ಎಂದು ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು