8:40 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ; 5300 ಕೋಟಿ ರೂ. ಕೊಡುವುದಾಗಿ ಕೇಂದ್ರ ವಿತ್ತ ಸಚಿವೆ ಘೋಷಿಸಿದರೂ ನಯಾಪೈಸೆ ಕೊಟ್ಟಿಲ್ಲ: ಸಿಎಂ

14/05/2025, 17:36

*ರಾಜ್ಯದ ಸಂಸದರು, ರಾಜ್ಯ ಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು: ಸಿಎಂ*

*ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಏಕೆ: ಸಿಎಂ ಪ್ರಶ್ನೆ*

*ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು: ಕೇಂದ್ರಕ್ಕೆ ಇದನ್ನೂ ಏಕೆ ಕೊಡಲಾಗುತ್ತಿಲ್ಲ: ಪ್ರಶ್ನಿಸಿದ ಸಿಎಂ*

*ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ: ಸಿಎಂ*

*ಕೇಂದ್ರಕ್ಕೆ ರಾಜ್ಯ ಸರ್ಕಾರದಿಂದ ಬರೆದ ಪತ್ರಗಳ ಮಾಹಿತಿ ಜೊತೆಗೆ ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದ ಸಿಎಂ*

*ಕೇಂದ್ರದ ಯೋಜನೆಗಳಿಗೆ ಕೇಂದ್ರದಿಂದ ಬಾರದ ಹಣ: ಸಭೆಯಲ್ಲಿ ಸಿಎಂ ಅಸಮಾಧಾನ*


ಬೆಂಗಳೂರು(reporterkarnataka.com):
ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಶೇ ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವಾ ನೀವು ಎಂದರು.


ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಙದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.
15ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡ್ತಾ ಇಲ್ಲ.
ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.
ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತಾರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ತಿಳಿಸಿದರು.
ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ ಕೇಂದ್ರ. ಇದು ಏಕೆ ಎಂದು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು