11:31 PM Sunday15 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ

ಇತ್ತೀಚಿನ ಸುದ್ದಿ

ರಾಜ್ಯದ ಸಂಸದರು ಕೇಂದ್ರದ ಅನುದಾನ ತರಲು ಪ್ರಯತ್ನಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

14/05/2025, 18:13

ಬೆಂಗಳೂರು(reporterkarnataka.com): ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ ಅನುದಾನವನ್ನು ತರಲು ಪ್ರಯತ್ನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಅನುದಾನವನ್ನು ಒದಗಿಸುವಂತೆ ಪ್ರಧಾನಮಂತ್ರಿಯವರನ್ನು, ಕೇಂದ್ರ ವಿತ್ತಸಚಿವರನ್ನೂ ಈಗಾಗಲೇ ಭೇಟಿ ಮಾಡಿ ಮನವಿ ಸಲ್ಲಿಸಿದ್ದರ ಬಗ್ಗೆ ಮುಖ್ಯಮಂತ್ರಿಗಳು ವಿವರಿಸಿದರು.
ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲಿಸಲು ರಚಿಸಲಾದ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯನ್ನು ಇಂದು ನಡೆಸಲಾಗಿದೆ. ಸುಮಾರು 67 ಕೇಂದ್ರ ಪುರಸ್ಕೃತ ಯೋಜನೆಗಳಿದ್ದು, ಅವುಗಳ ಪ್ರಗತಿಪರಿಶೀಲನೆ ನಡೆಸಲಾಗಿದೆ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಕೇಂದ್ರ ಹಾಗೂ ರಾಜ್ಯದ ಪಾಲು 50:50 , 60:40 , 70:30 ರಷ್ಟಿರುತ್ತದೆ. ಕರ್ನಾಟಕದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ 46859 ಕೋಟಿ ಖರ್ಚು ಮಾಡಲಾಗುತ್ತಿದೆ. 2024-25ರ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ರಾಜ್ಯದ ಅನುದಾನ 24960 ಕೋಟಿ ರೂಪಾಯಿಗಳು, ಕೇಂದ್ರದ ಅನುದಾನ 22758ಕೋಟಿ ರೂಪಾಯಿಗಳಿದ್ದು ಕೇಂದ್ರದಿಂದ 18561ಕೋಟಿ ಮಾತ್ರ ಬಿಡುಗಡೆ ಆಗಿದೆ 4195 ಕೋಟಿ ರೂಪಾಯಿಗಳು ಬಿಡುಗಡೆ ಆಗಿರುವುದಿಲ್ಲ ಎಂದರು.

*ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ:*
ರಾಜ್ಯದ ಪಾಲು ಹೆಚ್ಚಿರುವ ಕೇಂದ್ರ ಪುರಸ್ಕೃತ ಯೋಜನೆಗಳಡಿ ಶೇ. 83ರಷ್ಟು ಅನುದಾನ ಖರ್ಚಾಗಿದ್ದು, ಕೇಂದ್ರದಿಂದ ತಡವಾಗಿ ಅನುದಾನ ಬಿಡುಗಡೆಯೂ ಸೇರಿದಂತೆ ಹಲವು ಸಮಸ್ಯೆಗಳನ್ನು ವಿಷಯಗಳನ್ನು ಅಧಿಕಾರಿಗಳು ವಿವರಿಸಿದ್ದಾರೆ. ಆದ್ದರಿಂದ 2025-26 ರ ಸಾಲಿನಿಂದ ಶೇ.100 ರಷ್ಟು ಅನುದಾನವನ್ನು ಖರ್ಚು ಮಾಡಬೇಕಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನಿಗದಿತ ಸಮಯದಲ್ಲಿ ಅನುದಾನ ಬಿಡುಗಡೆ ಮಾಡಲು ಕೇಂದ್ರವನ್ನು ಕೋರುವಂತೆ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರಿಗೂ ಸೂಚಿಸಲಾಗಿದೆ ಎಂದರು.

*ಬಾಕಿ ಅನುದಾನ ಬಿಡುಗಡೆಗಾಗಿ ಕೇಂದ್ರಕ್ಕೆ ಪತ್ರ:*
ಅಭಿವೃದ್ಧಿ ಯೋಜನೆಗಳಿಗೆ ಸೂಕ್ತ ಅನುದಾನ ನೀಡದೇ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ತನ್ನ ಪಾಲನ್ನು ನೀಡಲೇಬೇಕು. ಕೇಂದ್ರದ ಪಾಲು ನೀಡಲು ರಾಜ್ಯ ಸರ್ಕಾರ ಪತ್ರ ಬರೆದಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು